ಹೆಚ್.ಡಿ.ಕುಮಾರಸ್ವಾಮಿಗೆ ವಚನಭ್ರಷ್ಟ ಎಂದ ಜಗದೀಶ್ ಶೆಟ್ಟರ್

Webdunia
ಭಾನುವಾರ, 8 ಜುಲೈ 2018 (14:43 IST)
ರಾಜ್ಯದ ರೈತರ ಸಂಪೂರ್ಣ ಸಾಲ ಮನ್ನಾ ಮಾಡದೇ ಸಿಎಂ ಕುಮಾರಸ್ವಾಮಿ ವಚನ ಭ್ರಷ್ಟರಾಗಿದ್ದಾರೆ ಎಂದು ಮಾಜಿ ಸಿಎಂ ದೂರಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ ಶೆಟ್ಟರ್ ಈ ಹೇಳಿಕೆ ನೀಡಿದ್ದಾರೆ.

ಸಿಎಂ ಕುಮಾರಸ್ವಾಮಿ ಚುನಾವಣೆ ಮುಂಚೆ ಭರವಸೆ ನೀಡಿದ್ರು, ಆದರೆ ನೀಡಿದ ಭರವಸೆಯನ್ನು ಸಂಪೂರ್ಣವಾಗಿ ಈಡೇರಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈತ್ರಿ ಸರ್ಕಾರ ಬಹಳ ವರ್ಷ ನಡೆಯುವದಿಲ್ಲವೆಂದು ಮಾಜಿ ಸಿಎಂ ಭವಿಷ್ಯ ನುಡಿದರು.
ಸಾಲಮನ್ನಾದಿಂದ ರೈತರಿಗೆ ಲಾಭವಾಗಿಲ್ಲ‌. ಇದರಿಂದ ಸಾಕಷ್ಟು ರೈತರಿಗೆ ಅನ್ಯಾಯವಾಗಿದೆ.

ಉಚಿತ ಬಸ್ ಪಾಸ್ ವಿಷಯದಲ್ಲಿ   ಸಿಎಂ ಕುಮಾರಸ್ವಾಮಿ ಮೌನಕ್ಕೆ ಜಾರಿದ್ದಾರೆ. ಶಾಂತಿಯುತ ಪ್ರತಿಭಟನೆ ಮಾಡ್ತಾಯಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಚ್ ಮಾಡಿಸಿದ್ದಾರೆ. ಸರ್ಕಾರ ಪೊಲೀಸರಿಂದ ಅನಾಚಾರ, ಅತ್ಯಾಚಾರ ಮಾಡಿಸಿದ್ದಾರೆಂದು ಆರೋಪ ಮಾಡಿದರು. ವಿದ್ಯಾರ್ಥಿಗಳಿಗೆ ಮೇಲೆ ಲಾಠಿ ಚಾರ್ಚ್ ಆಗಿರೋದನ್ನು ಖಂಡಿಸುತ್ತೇನೆ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Union Budget 2026: ನಿರ್ಮಲಾ ಬಜೆಟ್ ನಲ್ಲಿ ಯಾವುದಕ್ಕೆ ಏರಿಕೆ, ಯಾವುದಕ್ಕೆ ಇಳಿಕೆ ಇಲ್ಲಿದೆ ವಿವರ

Union Budget 2026 live: ಬೆಂಗಳೂರಿಗೆ ಭರ್ಜರಿ ಕೊಡುಗೆ

Union Budget 2026: ನಾವು ಶೇ.7 ರಷ್ಟು ಅಭಿವೃದ್ಧಿ ಹೊಂದಿದ್ದೇವೆ

ಬಜೆಟ್ ಆದ ತಕ್ಷಣವೇ ಪ್ರಧಾನಿ ಮೋದಿ ಇಂದು ಇಲ್ಲಿಗೆ ಭೇಟಿ ನೀಡುತ್ತಿದ್ದಾರೆ

Union Budget 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಈ ಬಾರಿ ಉಟ್ಟ ಸೀರೆಗೂ ಇದೆ ವಿಶೇಷತೆ

ಮುಂದಿನ ಸುದ್ದಿ
Show comments