Select Your Language

Notifications

webdunia
webdunia
webdunia
webdunia

ಮಹದಾಯಿ ವಿವಾದದ ಬಗ್ಗೆ ಗೋವಾ ಸಿಎಂ ಜೊತೆ ಚರ್ಚಿಸಿದ್ದೇನೆ: ಶೆಟ್ಟರ್

ಮಹದಾಯಿ ವಿವಾದದ ಬಗ್ಗೆ ಗೋವಾ ಸಿಎಂ ಜೊತೆ ಚರ್ಚಿಸಿದ್ದೇನೆ: ಶೆಟ್ಟರ್
ಬೆಂಗಳೂರು , ಭಾನುವಾರ, 24 ಸೆಪ್ಟಂಬರ್ 2017 (14:46 IST)
ಮಹದಾಯಿ ನದಿ ನೀರು ವಿವಾದದ ಬಗ್ಗೆ ದೂರವಾಣಿ ಮೂಲಕ ಗೋವಾ ಸಿಎಂ ಮನೋಹರ್ ಪರಿಕ್ಕರ್ ಜೊತೆ ಮಾತುಕತೆ ನಡೆಸಿರುವುದಾಗಿ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೂರವಾಣಿ ಮೂಲಕ ಸುತ್ತಿನ ಮಾತುಕತೆ ನಡೆಸಿದ್ದೇನೆ. ಸಕಾರಾತ್ಮಕ ಪ್ರತಿಕ್ರಿಯೇ ಬಂದಿದೆ. ಮಾತುಕತೆಗೆ 2-3 ದಿನಗಳಲ್ಲಿ ದಿನಾಂಕ ನಿದಗದಿ ಮಾಡಲಾಗುತ್ತದೆ. ವಿವಾದದ ಬಗ್ಗೆ ಸಮಾಲೋಚನೆ ನಡೆಸಿ syಬಳಿಕ ಬಿಜೆಪಿ ನಿಯೋಗ ಕೊಂಡೊಯ್ಯುವುದಾಗಿ ಶೆಟ್ಟರ್ ಹೇಳಿದ್ದಾರೆ.

ಇದೇವೇಳೆ, ನೀರಾವರಿ 60 ಸಾವಿರ ಕೋಟಿ ರೂ. ಕೊಟ್ಟಿದ್ದೇವೆ ಎಂದಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ಶೇಟ್ಟರ್, ಈ ಬಗ್ಗೆ ಬಹಿರಂಗ ಚರ್ಚೆಗೆ ಬರುವಂತೆ ಸವಾಲು ಹಾಕಿದ್ದಾರೆ. ಕಾಂಗ್ರೆಸ್`ನ ಮನೆಮನೆಗೆ ಕಾಂಗ್ರೆಸ್  ಕಾರ್ಯಕ್ರಮದ ಬಗ್ಗೆ ವ್ಯಂಗ್ಯವಾಡಿದ ಅವರು, ಕಾಂಗ್ರೆಸ್`ನವರು ಮುಂದಿನ ಚುನಾವಣೆಯಲ್ಲಿ ಅವರವರ ಮನೆಗೆ ಹೋಗುತ್ತಾರೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್`ಗೆ ಬಿಬಿಎಂಪಿ ಮೇಯರ್ ಸ್ಥಾನ ಬಿಟ್ಟುಕೊಟ್ಟಿದ್ದೇವೆ: ದೇವೇಗೌಡ