Select Your Language

Notifications

webdunia
webdunia
webdunia
webdunia

ಶೆಟ್ಟರ್, ಕೆ.ಎಸ್.ಈಶ್ವರಪ್ಪ ಸುಳ್ಳಿನ ಸರದಾರರು: ಉಗ್ರಪ್ಪ

ಶೆಟ್ಟರ್, ಕೆ.ಎಸ್.ಈಶ್ವರಪ್ಪ ಸುಳ್ಳಿನ ಸರದಾರರು: ಉಗ್ರಪ್ಪ
ಹುಬ್ಬಳ್ಳಿ , ಮಂಗಳವಾರ, 31 ಮೇ 2016 (19:26 IST)
ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಮತ್ತು ಕೆ.ಎಸ್.ಈಶ್ವರಪ್ಪ ಸುಳ್ಳಿನ ಸರದಾರರು ಎಂದು ಕಾಂಗ್ರೆಸ್ ಮುಖಂಡ ವಿ.ಎಸ್. ಉಗ್ರಪ್ಪ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ಹುಬ್ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿ.ಎಸ್. ಉಗ್ರಪ್ಪ, ಪ್ರತಿಪಕ್ಷ ಸ್ಥಾನಕ್ಕೆ ಜಗದೀಶ್ ಶೆಟ್ಟರ್ ಅರ್ಹರಲ್ಲ, ಜಗದೀಶ್ ಶೆಟ್ಟರ್ ಮತ್ತು ಕೆ.ಎಸ್.ಈಶ್ವರಪ್ಪ ಸುಳ್ಳಿನ ಸರದಾರರು ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ರಾಜ್ಯದ ರೈತರ ಕುರಿತು ಬಿಜೆಪಿ ನಾಯಕರಿಗೆ ಕಿಂಚಿತ್ತು ಕಾಳಜಿಯಿಲ್ಲ. ಕಳಸಾ ಬಂಡೂರಿ ಮತ್ತು ಮಹದಾಯಿ ಯೋಜನೆ ಜಾರಿ ಕುರಿತು ನಿರ್ಲಕ್ಷ ತೊರುತ್ತಿದ್ದಾರೆ. ಬಿಜೆಪಿ ರಾಜ್ಯದ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ಜಗದೀಶ್ ಶೆಟ್ಟರ್ ಮಧ್ಯ ಹೊಂದಾಣಿಕೆ ಇಲ್ಲ. ಇವರಿಬ್ಬರು ಉತ್ತರ, ದಕ್ಷಿಣ ದಿಕ್ಕಿನಂತಿದ್ದಾರೆ ಎಂದು ಆರೋಪಿಸಿದ್ದಾರೆ.
 
ರಾಜ್ಯ ಪೊಲೀಸರು ರಾಜ್ಯದ್ಯಾಂತ ಪ್ರತಿಭಟನೆ ನಡೆಸುವುದು ಅಸಮಂಜಸ. ರಾಜಕೀಯ ಹಿನ್ನೆಲೆಯಲ್ಲಿ ಪೊಲೀಸರಿಗೆ ಪ್ರತಿಭಟನೆ ಮಾಡುವಂತೆ ಬಿಜೆಪಿ ನಾಯಕರು ಪುಸಲಾಯಿಸುತ್ತಿದ್ದಾರೆ ಎಂದು ವಿ.ಎಸ್. ಉಗ್ರಪ್ಪ ಆರೋಪಿಸಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ಕನ್ನಡ ಭಾಷೆ ಕಲಿಯುವುದಲ್ಲದೇ ಕರ್ನಾಟಕ ಹಿತಾಸಕ್ತಿಗೆ ಬದ್ಧಳಾಗಿದ್ದೇನೆ: ನಿರ್ಮಲಾ ಸೀತಾರಾಮನ್