Webdunia - Bharat's app for daily news and videos

Install App

ರಾಜ್ಯಪಾಲರ ಭಾಷಣಕ್ಕೆ ಜಗದೀಶ್ ಶೆಟ್ಟರ್ ಆಕ್ರೋಶ

Webdunia
ಸೋಮವಾರ, 6 ಫೆಬ್ರವರಿ 2017 (15:14 IST)
ವಿಧಾನಮಂಡಲದ ಉಭಯ ಸದನಗಳ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ವಜೂಭಾಯಿ ವಾಲಾ ಮಾಡಿದ ಭಾಷಣ ಸುಳ್ಳಿನ ಕಂತೆ ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಟೀಕಿಸಿದ್ದಾರೆ.
 
ವಿಧಾನಸಭೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ರಾಜ್ಯಪಾಲರ ಬಾಯಲ್ಲಿ ಸುಳ್ಳು ಹೇಳಿಸಿದೆ. ರಾಜ್ಯಪಾಲರ ಭಾಷಣದಲ್ಲಿ 8200 ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದೆ ಎಂದು ಹೇಳಲಾಗಿದೆ. ಇಷ್ಟು ಘಟಕಗಳು ಆರಂಭವಾಗಿಯೇ ಇಲ್ಲ. 8200 ಶುದ್ಧ ಕುಡಿಯುವ ನೀರಿನ ಘಟಕ ಆರಂಭಿಸಿರುವುದನ್ನು ಸಾಬೀತು ಪಡಿಸಿದರೇ ಅವರು ಹೇಳಿದ ಹಾಗೇ ಕೇಳುತ್ತೇನೆ ಎಂದು ಸವಾಲ್ ಎಸೆದರು. 
 
ರಾಜಧಾನಿ ಬೆಂಗಳೂರಿನಲ್ಲಿ ಎಗ್ಗಿಲ್ಲದೆ ಶೂಟೌಟ್ ಪ್ರಕರಣಗಳು ನಡೆಯುತ್ತಿವೆ. ಹೊಸ ವರ್ಷಾಚರಣೆ ಸಂದರ್ಭದಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಗಳು ಕಾನೂನು ಸುವ್ಯವಸ್ಥೆ ಕುಸಿದಿರುವುದಕ್ಕೆ ಸಾಕ್ಷಿಯಾಗಿವೆ. ಆದರೂ ರಾಜ್ಯಪಾಲರ ಭಾಷಣದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳುವಲ್ಲಿ ರಾಜ್ಯ ಸರಕಾರ ಸಫಲವಾಗಿದೆ ಎಂದು ಹೇಳಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 
 
ವಿಧಾನಮಂಡಲದ ಅಧಿವೇಶನ ಕೇವಲ ನಾಲ್ಕು ದಿನಗಳ ಕಾಲ ನಡೆಸುವುದು ಯಾವ ಪುರುಷಾರ್ಥಕ್ಕೆ, ನಾಲ್ಕು ದಿನಗಳಲ್ಲಿ ಬರ ಪರಿಸ್ಥಿತಿ ಮೇಲೆ ಚರ್ಚೆ ನಡೆಸಲು ಸಾಧ್ಯವೇ ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಪ್ರಶ್ನಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಯೊಂದು ವರ್ಗವೂ ಪ್ರಧಾನಿ ಮೋದಿಯೊಂದಿಗಿದೆ ಎಂಬ ನಂಬಿಕೆ: ಪಿಯೂಷ್ ಗೋಯಲ್

ಕರಾವಳಿಯಲ್ಲಿ ಭಾರೀ ಮಳೆ, ನೇತ್ರಾವತಿ ನೀರಿನ ಮಟ್ಟ ಎಷ್ಟು ಏರಿಕೆಯಾಗಿದೆ ಗೊತ್ತಾ

ಅವಳನ್ನು ಕ್ಷಮಿಸುವ ಮೂಲಕ ಮೋದಿಯಿಂದ ಆಕೆಗೆ ಮರುಜೀವ: ಮೋದಿಗೆ ಧನ್ಯವಾದ ಸಲ್ಲಿಸಿದ ಬಾಲಕಿ ತಾಯಿ

ನಶಾ ಮುಕ್ತ ಭಾರತ ನಿರ್ಮಾಣಕ್ಕೆ ನರೇಂದ್ರ ಮೋದಿ ಸಂಕಲ್ಪ: ಮಹತ್ವದ ಅಭಿಯಾನಕ್ಕೆ ಪ್ರಧಾನಿಯಿಂದ ಚಾಲನೆ

ಕಾವೇರಿ ನೀರಿ ಹಂಚಿಕೆ ವಿಚಾರ, ಸರ್ವಪಕ್ಷ ಸಭೆಯಲ್ಲಿ ಡಿಕೆ ಶಿವಕುಮಾರ್ ಆಡಿದ ಮಾತು ಇಲ್ಲಿದೆ

ಮುಂದಿನ ಸುದ್ದಿ