Webdunia - Bharat's app for daily news and videos

Install App

‘ಚುನಾವಣೆಗೆ ನಿಂತು ಗಂಡಸ್ಸುತನ ತೋರು’ ಪ್ರಕಾಶ್ ರೈಗೆ ಜಗ್ಗೇಶ್ ಸವಾಲು!

Webdunia
ಶನಿವಾರ, 17 ಫೆಬ್ರವರಿ 2018 (10:01 IST)
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸದಾ ಕಿಡಿ ಕಾರುವ ಬಹುಭಾಷಾ ತಾರೆ ಪ್ರಕಾಶ್ ರೈಗೆ ನವರಸನಾಯಕ ಜಗ್ಗೇಶ್ ತಿರುಗೇಟು ನೀಡಿದ್ದಾರೆ.
 

ಮೋದಿಗೆ ದೇಶ ಆಳುವ ಹಕ್ಕಿಲ್ಲ ಎಂಬ ಪ್ರಕಾಶ್ ರೈ ಹೇಳಿಕೆ ಉಲ್ಲೇಖಿಸಿ ಜಗ್ಗೇಶ್ ಟ್ವಿಟರ್ ನಲ್ಲಿ ಸರಣಿ ಟ್ವೀಟ್ ಮಾಡಿ ಸವಾಲು ಹಾಕಿದ್ದಾರೆ. ಗಂಡಸ್ತನ ಇದ್ದರೆ ಚುನಾವಣೆಗೆ ಸ್ಪರ್ಧಿಸಿ ತಾಕತ್ತು ತೋರಿಸಿ ಎಂದು ಸವಾಲು ಹಾಕಿದ್ದಾರೆ.

‘ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಮಾತಾಡುವ ಹಕ್ಕಿದೆ. ಆದರೆ ಪ್ರಚಾರಕ್ಕೆ, ಕೈ ನಾಯಕರ ಶಹಬಾಶ್ ಗಿರಿಗೆ ಬೇಕಿತ್ತಾ ಈ ತಳಮಟ್ಟದ ನಡೆ? ಮೋದಿ ತೆಗಳಿ ಯಾರೋ ಏನೋ ಆದರು ಅಂತ ಸಾಲಲ್ಲಿ ನಿಂತು ಯಾಕೆ ಚಪ್ಪಾಳೆ ಪ್ರಶಸ್ತಿ ಸ್ವೀಕರಿಸುತ್ತೀರಿ? ನಿಲ್ಲಿ ಚುನಾವಣೆಗೆ! ತಟ್ಟಿತೊಡೆ ಅದು ಗಂಡಸ್ಸುತನ! ಯಾಕೆ ಚುನಾವಣೆ ಹೊಸ್ತಿಲಲ್ಲಿ ಈ ಡ್ರಾಮಾ ಕಂಪನಿ?’ ಎಂದು ಜಗ್ಗೇಶ್ ಕಿಡಿ ಕಾರಿದ್ದಾರೆ.

‘ನಿಮಗೆ ಏನು ಅರ್ಹತೆ ಇದೆ? ರಾಜಕೀಯ ಅನುಭವ ಇಲ್ಲಾ? ಕಾನೂನು ವಿದ್ಯಾರ್ಥಿಯೇ? ಅಲ್ಲ!ಗ್ರಾಮ, ಜಿಲ್ಲೆ, ತಾಲೂಕ್, ವಿಧಾನಸಭೆ, ಸಂಘಟನೆ, ಸ್ಪರ್ಧೆ? ಪರಿಚಯ?  ಅದೃಷ್ಟ ಇತ್ತು, ಪ್ರತಿಭೆ ಇತ್ತು ಬಿಡುವಿಲ್ಲದ ನಟನಾದೆ. ತಮಿಳು ನಟನಾಗಿ ಕನ್ನಡಕ್ಕೆ ಸೊಲ್ಲಡಗಿತ್ತು! ಈಗ ಯಾಕೆ ಈ ಪೌರುಷ? ಪ್ರಚಾರ ತಾನೆ? ವ್ಯರ್ಥ ಬದುಕು!’ ಎಂದು ಮತ್ತೊಂದು ಟ್ವೀಟ್ ನಲ್ಲಿ ಜಗ್ಗೇಶ್ ವಾಗ್ದಾಳಿ ನಡೆಸಿದ್ದಾರೆ.

ಅಷ್ಟೇ ಅಲ್ಲದೆ ಇನ್ನೊಂದು ಟ್ವೀಟ್ ನಲ್ಲಿ ನಮ್ಮ ನಿಮ್ಮ ಪ್ರಯಾಣ ರಾಜಕಿಶೋರ್ ಜತೆ ಮೈಸೂರು ಜೈಲಿಂದ! ನಾನು ಮರೆತಿಲ್ಲ! ಹೆಮ್ಮೆ ಪಟ್ಟೆ ನಿಮ್ಮ ಬೆಳವಣಿಗೆಗೆ! ರಾತ್ರೋ ರಾತ್ರಿ ರಾಷ್ಟ್ರ ನಾಯಕನಾಗಲು ಮೋದಿ ತೆಗಳುವ ಆಯ್ಕೆ! ನೆನಪಿಡಿ ಮೋದಿ ತೆಗಳಿದ್ದಕ್ಕೆ ನಿಮಗೆ ಮಾತನಾಡಲು ವೇದಿಕೆ ಸಿಗುತ್ತಿದೆ ಎಂದು ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments