Webdunia - Bharat's app for daily news and videos

Install App

ಮತ್ತೆ ರಮ್ಯಾ ವಿರುದ್ಧ ಗರಂ ಆದ ನವರಸನಾಯಕ ಜಗ್ಗೇಶ್

Webdunia
ಶುಕ್ರವಾರ, 31 ಆಗಸ್ಟ್ 2018 (11:00 IST)
ಬೆಂಗಳೂರು: ನಟಿ, ಮಾಜಿ ಸಂಸದೆ ರಮ್ಯಾ ಮತ್ತು ನಟ, ಬಿಜೆಪಿ ನಾಯಕ ಜಗ್ಗೇಶ್ ನಡುವೆ ನೀರ್ ದೋಸೆ ಸಿನಿಮಾದಿಂದ ಹುಟ್ಟಿಕೊಂಡ ವೈಮನಸ್ಯ ಈಗ ತಮ್ಮ ತಮ್ಮ ಪಕ್ಷಗಳ ವಿಚಾರದಲ್ಲಿ ಮುಂದುವರಿಯುತ್ತಲೇ ಇರುತ್ತದೆ.

ಈ ಬಾರಿ ಆರ್ ಎಸ್ ಎಸ್ ಸಂಘಟನೆ ಬಗ್ಗೆ ಕೇರಳ ಪ್ರವಾಹ ವಿಚಾರದಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ಕಾಂಗ್ರೆಸ್ ನ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆಯೂ ಆಗಿರುವ ರಮ್ಯಾ ವಿರುದ್ಧ ಜಗ್ಗೇಶ್ ಗರಂ ಆಗಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಜಗ್ಗೇಶ್  ರಮ್ಯಾ ಹೆಸರು ಹೇಳದೇ ಟಾಂಗ್ ಕೊಟ್ಟಿದ್ದಾರೆ. ‘ಯಾರಿಗೆ ವಸ್ತುಸ್ಥಿತಿ ಅನುಭವದ ಕೊರತೆ ಅಂಥವರು ಬೇಜವಾಬ್ಧಾರಿಯ ಹೇಳಿಕೆ ಕೊಡುತ್ತಾರೆ. ಕೇರಳ ಕೊಡಗಿನ ಮಳೆ ಅವಾಂತರಕ್ಕೆ ಭುಜಕೊಟ್ಟಿದ್ದು ಆರ್ ಎಸ್ಎಸ್  ವಿನಹ ಇಂಥಹ ಬಾಲಿಶ ಹೇಳಿಕೆ ಕೊಡುವವರಲ್ಲ! ಅಂದೆ ನೆಹರು ಆರ್ ಎಸ್ಎಸ್ ಕಾರ್ಯವೈಖರಿ ಮೆಚ್ಚಿ ಹೊಗಳಿದ್ದರು. ಓದಲು ಬಂದರೆ ಇತಿಹಾಸ ಪುಟ ತಿರುಗಿಸಿ ಓದಲು ಹೇಳಿ! ಆಗಲು ತಿಳಿಯದಿದ್ದರೆ ಕ್ಯಾಚ್ ಆಫೀಸರ್ ಕೆಲಸ ಕಂಟಿನ್ಯೂ ಮಾಡಿ’ ಎಂದು ರಮ್ಯಾಗೆ ಜಗ್ಗೇಶ್ ತಿರುಗೇಟು ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments