Webdunia - Bharat's app for daily news and videos

Install App

ಜೈನ ಸಂಪ್ರದಾಯದಂತೆ ಜೈನಮುನಿ ಅಂತ್ಯಸಂಸ್ಕಾರ

Webdunia
ಸೋಮವಾರ, 10 ಜುಲೈ 2023 (08:31 IST)
ಚಿಕ್ಕೋಡಿ : ಆಪ್ತರಿಂದ ಹತ್ಯೆಗೀಡಾಗಿದ್ದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಅಂತ್ಯಸಂಸ್ಕಾರ ಜೈನ ಧರ್ಮದ ಸಂಪ್ರದಾಯದಂತೆ ಭಾನುವಾರ (ಇಂದು) ಹಿರೇಕೋಡಿಯ ನಂದಿಪರ್ವತದ ಆಶ್ರಮದ ಬಳಿ ನೆರವೇರಿತು.

ಸ್ವಾಮೀಜಿಯವರ ಪೂರ್ವಾಶ್ರಮದ ಸಹೋದರನ ಪುತ್ರ ಅವರ ಚಿತೆಗೆ ಅಗ್ನಿ ಸ್ಪರ್ಶ ಮಾಡಿದ್ದಾರೆ. ಚಿತೆಗೆ ಹಾಲು, ಬೆಲ್ಲ, ಕೊಬ್ಬರಿ, ಕರ್ಪೂರ, ಗಂಧದ ಕಟ್ಟಿಗೆ, ಬಾದಾಮಿ, ತುಪ್ಪವನ್ನು ಎರೆಯಲಾಯಿತು. ಈ ವೇಳೆ ಭಕ್ತರ ಆಕ್ರಂದನ ಮುಗಿಲು ಮುಟ್ಟಿತ್ತು. 

ಸ್ವಾಮೀಜಿ ಹತ್ಯೆ ಖಂಡಿಸಿ ಸೋಮವಾರ ಮೌನ ಪ್ರತಿಭಟನೆಗೆ ಜೈನ ಸಮುದಾಯ ಮುಂದಾಗಿದೆ. ಸ್ವಾಮೀಜಿಯವರ ಸಾವಿಗೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಸ್ವಾಮೀಜಿಯವರ ಹತ್ಯೆಗೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments