Select Your Language

Notifications

webdunia
webdunia
webdunia
webdunia

ಜೈನ ಮುನಿ ಹತ್ಯೆ ಪ್ರಕರಣ ಸಿಬಿಐಗೆ ನೀಡಲ್ಲ : ಪರಮೇಶ್ವರ್

ಜೈನ ಮುನಿ ಹತ್ಯೆ ಪ್ರಕರಣ ಸಿಬಿಐಗೆ ನೀಡಲ್ಲ : ಪರಮೇಶ್ವರ್
ಬೆಳಗಾವಿ , ಮಂಗಳವಾರ, 11 ಜುಲೈ 2023 (07:34 IST)
ಬೆಳಗಾವಿ : ಹಿರೇಕೋಡಿಯ ಜೈನ ಮುನಿಗಳ ಬರ್ಬರ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
 
ಬೆಳಗಾವಿ ತಾಲೂಕಿನ ಹಲಗಾ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ದುರ್ಘಟನೆ ನಡೆಯಬಾರದಿತ್ತು. ಇದರಿಂದ ನನಗೆ ಬಹಳ ನೋವಾಗಿದೆ. ಒಬ್ಬ ಸ್ವಾಮೀಜಿ, ಸಂತ ಯಾವುದೇ ಅಪೇಕ್ಷೆ ಇಲ್ಲದೇ ಜೀವನ ನಡೆಸುತ್ತಾರೆ. ಅಂಥವರಿಗೆ ಯಾವುದೇ ಕಾರಣಕ್ಕೂ ಹೀಗೆ ಆಗಬಾರದು ಎಂದಿದ್ದಾರೆ. 

ನಮ್ಮ ರಾಜ್ಯದ ಪೊಲೀಸರು ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಪತ್ತೆಹಚ್ಚಿದ್ದಾರೆ. ಬಂಧಿಸಿತರ ವಿರುದ್ಧ ಈಗಾಗಲೇ ತನಿಖೆ ಆರಂಭವಾಗಿದೆ. ಯಾರೂ ಉದ್ರೇಕಗೊಳ್ಳಬಾರದು. ಎಲ್ಲವನ್ನೂ ಕಾನೂನು ನೋಡಿಕೊಳ್ಳಲಿದೆ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಧಾನಸಭೆಗೆ ಅಪರಿಚಿತ ವ್ಯಕ್ತಿ ಬೆನ್ನಲ್ಲೇ ಖಾದರ್ ಅಲರ್ಟ್