Select Your Language

Notifications

webdunia
webdunia
webdunia
Tuesday, 1 April 2025
webdunia

ಜೈನಮುನಿ ಹತ್ಯೆ ಪ್ರಕರಣ, CID ತನಿಖೆ ಚುರುಕು

ಜೈನಮುನಿ ಹತ್ಯೆ ಪ್ರಕರಣ
ಚಿಕ್ಕೋಡಿ , ಸೋಮವಾರ, 24 ಜುಲೈ 2023 (20:20 IST)
ಹಿರೇಕೋಡಿ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣ ತನಿಖೆಯನ್ನು ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಜೈನಮುನಿ ಹತ್ಯೆ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರವಾದ ಬೆನ್ನಲ್ಲೇ ಅಧಿಕಾರಿಗಳು ಚಿಕ್ಕೋಡಿಗೆ ಭೇಟಿ ನೀಡಿದ್ದು, ತನಿಖೆ ನಡೆಸಿದ್ದಾರೆ. ಸಿಐಡಿ ಎಸ್‌ಪಿ ವೆಂಕಟೇಶ, ಡಿವೈಎಸ್‌ಪಿ ಹೆಚ್.ಡಿ.ಕುಲಕರ್ಣಿ ನೇತೃತ್ವದ ಆರು ಅಧಿಕಾರಿಗಳ ತಂಡ, ನಿನ್ನೆ ಹಿರೇಕೋಡಿ ನಂದಿಪರ್ವತ ಆಶ್ರಮಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದೆ. ಅಲ್ಲದೇ ಚಿಕ್ಕೋಡಿ ಡಿವೈಎಸ್‌ಪಿ ಬಸವರಾಜ ಯಲಿಗಾರ ಸೇರಿದಂತೆ ಬೆಳಗಾವಿ ಜಿಲ್ಲಾ ಪೊಲೀಸರಿಂದಲೂ ಸಿಐಡಿ ತಂಡ ಮಾಹಿತಿ ಪಡೆದುಕೊಂಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮನ್ಮುಲ್ ಕಾಂಗ್ರೆಸ್ ತೆಕ್ಕೆಗೆ, JDSಗೆ ಶಾಕ್