Webdunia - Bharat's app for daily news and videos

Install App

ಕಾವೇರಿ ನೀರು ಕಳ್ಳರಿಗೆ ಜಲಮಂಡಳಿ ಅಧ್ಯಕ್ಷರ ಎಚ್ಚರಿಕೆ

geetha
ಗುರುವಾರ, 11 ಜನವರಿ 2024 (14:00 IST)
ಬೆಂಗಳೂರು-ಕಾವೇರಿ ನೀರು ಕಳ್ಳರ ವಿರುದ್ಧ ಬೆಂಗಳೂರು ಜಲಮಂಡಳಿ ಅಧ್ಯಕ್ಷರು ಸಮರಸಾರಿದ್ದಾರೆ.ಅಕ್ರಮ ಕಾವೇರಿ ನೀರು ಸಂಪರ್ಕ ಪತ್ತೆಗೆ ಜಲಮಂಡಳಿ ಅಧ್ಯಕ್ಷರು ಸೂಚನೆ ನೀಡಿದ್ದಾರೆ.ಬಿಬಿಎಂಪಿ ವ್ಯಾಪ್ತಿಯ ವಾಣಿಜ್ಯ ಕಟ್ಟಡ  ಬಹುಮಹಡಿ ಕಟ್ಟಡ ಹಾಗೂ ಕೈಗಾರಿಕಾ ಕಟ್ಟಡಗಳಲ್ಲಿ ಕಾವೇರು ನೀರು ಕಳ್ಳತನದ ದೂರು ದಾಖಲಾಗಿದೆ.ಹೀಗಾಗಿ ವಾಣಿಜ್ಯ ಕಟ್ಟಡಗಳು, ಬಹುಮಹಡಿ ವಸತಿ ಕಟ್ಟಡಗಳು ಮತ್ತು ಕೈಗಾರಿಕಾ ಕಟ್ಟಡಗಳಲ್ಲಿ ಅಕ್ರಮ ನೀರಿನ ಸಂಪರ್ಕ ಪತ್ತೆಗೆ ಸೂಚನೆ ನೀಡಲಾಗಿದೆ.
 
ಅನಧಿಕೃತ ನೀರು ಮತ್ತು ಒಳಚರಂಡಿ ಸಂಪರ್ಕ ದಿಂದ ಬೆಂಗಳೂರು ಜಲಮಂಡಳಿಗೆ  ಭಾರೀ ನಷ್ಟ ಉಂಟಾಗಿದೆ.ಆರ್ಥಿಕ ನಷ್ಟದ ಹಿನ್ನಲೆ ಜಲಮಂಡಳಿ ಅಧ್ಯಕ್ಷರು ಅಲರ್ಟ್ ಆಗಿದ್ದಾರೆ.ಅನಧಿಕೃತ ನೀರು ಹಾಗೂ ಒಳಚರಂಡಿ ಸಂಪರ್ಕ ಪತ್ತೆ ಹಚ್ಚುವಂತೆ ಚೀಫ್ ಎಂಜಿನಿಯರ್ ಗಳಿಗೆ ಜಲಮಂಡಳಿ ಅಧ್ಯಕ್ಷರು ಸೂಚನೆ ನೀಡಿದ್ದು,ಮಾರ್ಚ್ 31 ರೊಳಗೆ ಸರ್ವೆ ನಡೆಸಿ ಅಕ್ರಮ ನೀರು ಸಂಪರ್ಕ ಹಾಗೂ ಬೈಪಾಸ್ ನೀರಿನ ಸಂಪರ್ಕ ಕ್ರಮಕ್ಕೆ ಸೂಚಿಸಿದ್ದಾರೆ ಜೊತೆಗೆ ಮಾರ್ಚ್ 31 ರೊಳಗೆ ವರದಿ ನೀಡುವಂತೆ ಚೀಫ್ ಎಂಜಿನಿಯರ್ ಗಳಿಗೆ ಕಟ್ಟಿನಿಟ್ಟಿನ ಆದೇಶ ನೀಡಿದ್ದಾರೆ.
 
ಈ ಬಗ್ಗೆ ಏಪ್ರಿಲ್ ೧ ರಿಂದ ಆಂತರಿಕ ಆಡಿಟ್ ತಂಡದಿಂದ ಪರಿಶೀಲಿಸಲಾಗುವುದು.ಈ ವೇಳೆ ನ್ಯೂನತೆ ಕಂಡುಬಂದಲ್ಲಿ ಶಿಸ್ತುಕ್ರಮದ ಎಚ್ಚರಿಕೆ ನೀಡಲಾಗಿದೆ.ಇಲಾಖೆಗೆ ಉಂಟಾಗುವ ಆರ್ಥಿಕ ನಷ್ಟವನ್ನು ಸಂಬಂಧಪಟ್ಟ ಸಿಬ್ಬಂದಿ ಅಧಿಕಾರಿಗಳೇ ಭರಿಸುವ ಎಚ್ಚರಿಕೆ ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments