Webdunia - Bharat's app for daily news and videos

Install App

ನಾಡಿನ ಪ್ರಖ್ಯಾತ ದೇವಿಗೆ ಜಲದಿಗ್ಬಂಧನ : ಬೆಚ್ಚಿ ಬಿಳ್ತಿರೋ ಭಕ್ತರು

Webdunia
ಗುರುವಾರ, 7 ನವೆಂಬರ್ 2019 (21:05 IST)
ಕರ್ನಾಟಕದ ಶಕ್ತಿಮಾತೆ ಎಂದೇ ಪ್ರಖ್ಯಾತಿ ಹೊಂದಿರುವ ದೇವಿಗೆ ಜಲದಿಗ್ಬಂಧನ ಆಗಿರೋದು ಜನತೆಯಲ್ಲಿ ಆತಂಕಕ್ಕೆ ಕಾರಣವಾಗಿದೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಕಟನೂರ ಗ್ರಾಮದ ಎಲ್ಲಮ್ಮ ದೇವಿ ದೇವಸ್ಥಾನ ಮೂರನೆಯ ಬಾರಿ ಮುಳುಗಡೆ ಆಗಿದೆ.

ಮಳೆರಾಯನ ಅಬ್ಬರದಿಂದಾಗಿ ಕೃಷ್ಣಾ ನದಿಯ ಪ್ರವಾಹಕ್ಕೆ ತುತ್ತಾಗಿದ್ದ ಅಥಣಿ ತಾಲೂಕಿನ 21 ಗ್ರಾಮಗಳಲ್ಲಿ ಜನರು ತಮ್ಮ ಬದುಕು ಕಟ್ಟಿಕೊಳ್ಳಲು ಪರದಾಡುತ್ತಿದ್ದಾರೆ. ಈ ನಡುವೆ ಮತ್ತೆ ವರುಣ ತನ್ನ ಅಬ್ಬರ ಮುಂದುವರೆಸಿದ್ದು, ಸದ್ಯ ಜನರಲ್ಲಿ ಆತಂಕ ಮನೆ ಮಾಡಿದೆ. ಜಮೀನುಗಳಲ್ಲಿ ನೀರು ನಿಂತ ಪರಿಣಾಮ ಕಟಾವಿಗೆ ಬಂದ ಮೆಕ್ಕೆಜೋಳ ಮತ್ತು ದ್ವಿದಳ ಧಾನ್ಯಗಳು ಅಲ್ಲೆ ಮೊಳಕೆ ಒಡೆಯುವ ಸ್ಥಿತಿ ನಿರ್ಮಾಣವಾಗಿದೆ. ಇತ್ತ ದೇವಾನು ದೇವತೆಗಳಿಗೂ ಜಲಕಂಟಕ ಎದುರಾಗಿ ಭಕ್ತರು ಪರದಾಡುವಂತಾಗಿದೆ.

ಅಥಣಿ ತಾಲೂಕಿನ ಎಲ್ಲಮ್ಮವಾಡಿಯ ರೇಣುಕಾದೇವಿ ಎಲ್ಲಮ್ಮನ ಪವಾಡಗಳು ಜನ-ಜನಿತವಾಗಿರುವಾಗಲೇ ಕಳೆದ ಎರಡು ತಿಂಗಳ ಅವಧಿಯಲ್ಲಿ ದೇವಸ್ಥಾನ ಮೂರನೆಯ ಬಾರಿ ಮುಳುಗಡೆ ಆಗಿದೆ. ಮಹಾರಾಷ್ಟ್ರದ ಮೀರಜ್, ಸಾಂಗಲಿ, ಕೊಲ್ಹಾಪುರ, ಕನ್ಹೇರಿ ಸೇರಿದಂತೆ ಹಲವೆಡೆಯಿಂದ ಭಕ್ತಸಾಗರ ಹರಿದು ಬರುತ್ತಿದ್ದು, ಭಕ್ತರು ದೇವಿಯ ದರ್ಶನಕ್ಕೆ ಪರದಾಡುವಂತಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕಾಂಗ್ರೆಸ್ ಅವಧಿಯಲ್ಲಿ ಮಿತಿಮೀರಿದೆ ಕಮಿಷನ್: ನಮ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿದ್ರಿ ಆರ್ ಅಶೋಕ್ ಆಕ್ರೋಶ

ಗಣೇಶನ ಮೂರ್ತಿಯನ್ನು ಮನೆಯ ಯಾವ ದಿಕ್ಕಿನಲ್ಲಿ ಕೂರಿಸಬೇಕು ಇಲ್ಲಿದೆ ವಿವರ

ಥೈರಾಯ್ಡ್ ಇದ್ದರೆ ಜೀವನ ಪರ್ಯಂತ ಮಾತ್ರೆ ತೆಗೆದುಕೊಳ್ಳಬೇಕೇ: ಡಾ ಪದ್ಮಿನಿ ಪ್ರಸಾದ್ ಏನು ಹೇಳಿದ್ದರು

ಗಣೇಶ ಹಬ್ಬಕ್ಕೆ ಮತ್ತೆ ಬಂತು ಕಠಿಣ ರೂಲ್ಸ್: ಗಣೇಶನನ್ನು ಕೂರಿಸುವವರು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments