Webdunia - Bharat's app for daily news and videos

Install App

ಜಮೀರ್ ಅಹಮ್ಮದ್, ಚೆಲುವರಾಯ ಸ್ವಾಮಿಗೆ ಈಗ ಕಾಂಗ್ರೆಸ್ ಓಲೈಸುವುದೇ ಕೆಲಸ!

Webdunia
ಮಂಗಳವಾರ, 7 ಫೆಬ್ರವರಿ 2017 (10:28 IST)
ಬೆಂಗಳೂರು: ಜೆಡಿಎಸ್ ನಿಂದ ಹೊರ ಹಾಕಲ್ಪಟ್ಟ ಮೇಲೆ ಶಾಸಕ ಜಮೀರ್ ಅಹಮ್ಮದ್,  ಚೆಲುವರಾಯ ಸ್ವಾಮಿ ಸ್ಥಿತಿ ತ್ರಿಶಂಕುವಾಗಿದೆ. ಬಿಜೆಪಿಗೆ ಹೋಗಲಾರದೆ ಕಾಂಗ್ರೆಸ್ ಓಲೈಕೆಯಲ್ಲಿ ತೊಡಗಿದ್ದಾರೆ.

 
ನಿನ್ನೆ ವಿಧಾನಮಂಡಲದ ಅಧಿವೇಶನಕ್ಕೆ ಮುನ್ನ ರಾಜ್ಯಪಾಲರ ಭಾಷಣದಲ್ಲಿ ಪ್ರಸ್ತಾಪವಾದ ವಿಷಯಗಳ ಬಗ್ಗೆ ಬಿಜೆಪಿ, ಜೆಡಿಎಸ್ ಕಟು ಟೀಕೆ ಮಾಡುತ್ತಿದ್ದರೆ,  ಚೆಲುವರಾಯ ಸ್ವಾಮಿ ಹೊಗಳುತ್ತಿದ್ದಾರೆ. ರಾಜ್ಯಪಾಲರ ಭಾಷಣದಲ್ಲಿ ಉತ್ತಮ ಬಜೆಟ್ ನ ಸೂಚನೆ ಸಿಕ್ಕಿದೆ ಎಂದು ಚೆಲುವರಾಯ ಸ್ವಾಮಿ ಬಣ್ಣಿಸಿದ್ದಾರೆ. ಈ ಮೂಲಕ ಆಡಳಿತ ಪಕ್ಷ ಕಾಂಗ್ರೆಸ್ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ.

ಅತ್ತ ಜಮೀರ್ ಅಹಮ್ಮದ್ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಜತೆ ಭಾರೀ ಚರ್ಚೆಯಲ್ಲಿ ತೊಡಗಿದ್ದು ಕಂಡುಬಂತು. ಸುಮಾರು ಮುಕ್ಕಾಲು ಗಂಟೆ ಭಿನ್ನಮತೀಯ ನಾಯಕ ಜಮೀರ್ ಅಹಮ್ಮದ್ ಡಿಕೆಶಿ ಜತೆ ಚರ್ಚಿಸಿದ್ದು, ಕುತೂಹಲ ಮೂಡಿಸಿತು.  ಜೆಡಿಎಸ್ ನಿಂದ ಉಚ್ಛಾಟಿತರಾದ ಈ ನಾಯಕರುಗಳು ಕಾಂಗ್ರೆಸ್ ಓಲೈಕೆಯಲ್ಲಿ ತೊಡಗಿರುವುದು ನೋಡಿದರೆ ಇವರು ಕಾಂಗ್ರೆಸ್ ಸೇರುತ್ತಾರೆಂಬ ವದಂತಿಗಳಿಗೆ ಇನ್ನಷ್ಟು ಇಂಬು ನೀಡಿದಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಧುನಿಕ ಹಿಟ್ಲರ್ ಖಮೇನಿ ಅಸ್ತಿತ್ವ ಹೆಚ್ಚು ದಿನ ಇರಲ್ಲ: ಇಸ್ರೇಲ್ ರಕ್ಷಣಾ ಸಚಿವ ವಾರ್ನಿಂಗ್‌

ಮುಸ್ಲಿಂ ಮೀಸಲಾತಿ ಮಾಡಿ ಹಿಂದುಳಿದವರಿಗೆ ಭಾರೀ ಅನ್ಯಾಯ: ಪ್ರಲ್ಹಾದ್ ಜೋಶಿ

ಗೃಹಲಕ್ಷ್ಮಿ: ಬಾಕಿ ಹಣದ ಬಗ್ಗೆ ಬಿಗ್‌ ಅಪ್ಡೇಟ್ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್‌

ಮುಸ್ಲಿಮರಿಗೆ ಮತ್ತೊಂದು ಮೀಸಲಾತಿ ಹೆಚ್ಚಳಕ್ಕೆ ಮುಂದಾದ ರಾಜ್ಯ ಸರ್ಕಾರ

ಬೆಂಗಳೂರಿನ ಅಕ್ಷಯ್ ಕೊನೆಗೂ ಬದುಕುಳಿಯಲಿಲ್ಲ: ಅಜ್ಜ, ಅಜ್ಜಿಯ ಹೋಮವೂ ಫಲವಾಗಲಿಲ್ಲ

ಮುಂದಿನ ಸುದ್ದಿ
Show comments