ಸುಮಲತಾ ಜೊತೆ ಮಂಡ್ಯ ನಾಯಕರು ಊಟಕ್ಕೆ ಹೋಗಿರುವುದರಲ್ಲಿ ತಪ್ಪೇನಿದೆ- ಕೈ ಮುಖಂಡರ ಪರ ನಿಂತ ಜಮೀರ್

Webdunia
ಶನಿವಾರ, 4 ಮೇ 2019 (07:04 IST)
ಬೆಂಗಳೂರು : ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರ ಜೊತೆ ಮಂಡ್ಯ ಕಾಂಗ್ರೆಸ್ ನಾಯಕರು ಊಟಕ್ಕೆ ಹೋಗಿದ್ದಕ್ಕೆ ಸಿಎಂ ಕುಮಾರಸ್ವಾಮಿ ಬೇಸರಗೊಂಡಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಜಮೀರ್ ಅಹ್ಮದ್ ಮಂಡ್ಯ ನಾಯಕರ ಪರ ನಿಂತಿದ್ದಾರೆ.




ಮಂಡ್ಯ ನಾಯಕರ ಜೊತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾತುಕತೆ ನಡೆಸುವ ವೇಳೆ ಅಲ್ಲಿಗೆ ಆಗಮಿಸಿದ ಜಮೀರ್ ಅಹಮ್ಮದ್ ಅವರು ಮಾತನಾಡಿ, ಊಟಕ್ಕೆ ಹೋಗುವುದು ತಪ್ಪಲ್ಲ. ಯಾರೇ ಕರೆದರೂ ಊಟಕ್ಕೆ ಹೋಗುತ್ತಾರೆ. ನನ್ನನ್ನು ಕರೆದರೂ ನಾನು ಊಟಕ್ಕೆ ಹೋಗುತ್ತೇನೆ.


ಬರ್ತ್‍ಡೇ ಪಾರ್ಟಿ ಅಂತ ಹೋಗಿದ್ದಾರೆ. ಮಂಡ್ಯ ನಾಯಕರು ಹೋಗಿದ್ದ ಪಾರ್ಟಿಗೆ ಸುಮಲತಾ ಅಂಬರೀಶ್ ಅವರು ಬರುತ್ತಾರೆ ಅಂತ ಯಾರಿಗೂ ಗೊತ್ತಿರಲಿಲ್ಲ. ಇದರಲ್ಲಿ ತಪ್ಪೇನಿದೆ. ಸಿಎಂ ಕುಮಾರಸ್ವಾಮಿಯವರು ಬೇಜಾರು ಮಾಡಿಕೊಂಡರೆ ನಾವೇನು ಮಾಡಲು ಆಗುತ್ತದೆ ಎಂದು ಮಂಡ್ಯ ನಾಯಕರ ಪರ ಬ್ಯಾಟ್ ಬೀಸಿದ್ದಾರೆ.


ಅಲ್ಲದೇ ಮಂಡ್ಯ ಉಪ ಚುನಾವಣೆಯಲ್ಲಿ ಎಲ್ಲರನ್ನೂ ಕರೆಸಿ ಸಿಎಂ ಮಾತನಾಡಿದ್ದರು. ಆದರೆ ಈ ಚುನಾವಣೆಯಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಎಲ್ಲರನ್ನೂ ಕರೆದು ಮಾತನಾಡಿದ್ದರೆ ಸರಿ ಆಗುತಿತ್ತು ಎಂದು ಪರೋಕ್ಷವಾಗಿ ಕುಮಾರಸ್ವಾಮಿ ಅವರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಹೈಡ್ರಾಮಾ: ಮೆಟ್ರೋ ನಿಲ್ದಾಣ ನುಗ್ಗಿದ ಸಿಜೆಪಿ ಪ್ರತಿಭಟನಾಕಾರರು; ಭಾರಿ ಲಾಠಿ ಪ್ರಹಾರ, ಇಂಟರ್ನೆಟ್ ಸ್ಥಗಿತ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕಳ್ಳತನದ ಬೆನ್ನಲ್ಲೇ ರೈಲಿನಿಂದ ಕೆಳಗೆ ಬಿದ್ದ ಮೊಬೈಲ್ ಕಳ್ಳ: Shocking video

ತಿಂಡಿ ಖರೀದಿಸುತ್ತಿದ್ದವಳು ಕ್ಷಣಾರ್ಧದಲ್ಲಿ ಸಾವು: ಸಣ್ಣ ತಪ್ಪಿನಿಂದ ರೈಲಿನಡಿಗೆ ಸಿಲುಕಿ ಪೀಸ್ ಪೀಸ್ Video

ದೆಹಲಿಯ ಜಂತರ್ ಮಂಥರ್ ನಲ್ಲಿ ಜಿರಳೆ ಪಾರ್ಟಿ ಸದಸ್ಯರ ಮೇಲೆ ಲಾಠಿ ಚಾರ್ಜ್: ದಿಕ್ಕಾಪಾಲಾಗಿ ಓಡಿದ ಸಿಜೆಪಿ ಸದಸ್ಯರು Video

ಮುಂದಿನ ಸುದ್ದಿ
Show comments