Publish Date: Mon, 19 Feb 2024 (17:01 IST)
Updated Date: Mon, 19 Feb 2024 (17:07 IST)
ಬೆಂಗಳೂರು :ಬಜೆಟ್ ಮೇಲಿನ ಚರ್ಚೆಯ ಅಧಿವೇಶನದದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಮಾತಿನ ಚಕಮಕಿಗೆ ಕಾರಣವಾಯಿತು. ವಸತಿ ಸಚಿವ ಜಮೀರ್ ಅಹ್ಮದ್ ಪ್ರಶ್ನೋತ್ತರ ಸಮಯದಲ್ಲಿ ಬಿಜೆಪಿಗೆ ಕಠಿಣ ಮಾತುಗಳಿಂದ ಬಾಯ್ಮುಚ್ಚಿಸಿದ ಘಟನೆಯೂ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ . ವಿಜಯೇಂದ್ರ ಮಾತನಾಡಿ, ಸಿದ್ದರಾಮಯ್ಯ ಸರ್ಕಾರಕ್ಕೆ ಅಲ್ಪಸಂಖ್ಯಾತರ ಮೇಲಿರುವ ಪ್ರೀತಿ ಎಲ್ಲಿರಗೂ ತಿಳಿದಿರುವುದೇ. ಬರದ ಸಮಯದಲ್ಲಿಯೂ ಅಲ್ಪಸಂಖ್ಯಾತರ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ. ನೀಡುವುದಾಗಿ ಹೇಳಿಕೆ ನೀಡಿದ್ದರು.
ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ ಒಂದು ಸಾವಿರ ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಇದರಲ್ಲೂ ಸಹ ಕಾಂಗ್ರೆಸ್ ಪಕ್ಷದ ಸದಸ್ಯರಿಗೆ ಮಾತ್ರ ಅನುದಾನ ನೀಡಿ ಬಿಜೆಪಿ ಮತ್ತು ಜೆಡಿಎಸ್ ಶಾಸಕರಿಗೆ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದರು.