Webdunia - Bharat's app for daily news and videos

Install App

ಬರಿಗಾಲಿನಲ್ಲಿ ಬೆಟ್ಟ ಏರಿ ಹರಕೆ ತೀರಿಸಿದ ಜನಾರ್ಧನರೆಡ್ಡಿ

Webdunia
ಶನಿವಾರ, 4 ಜುಲೈ 2015 (18:18 IST)
ರಾಜ್ಯದ ಮಾಜಿ ಸಚಿವ ಜನಾರ್ಧನರೆಡ್ಡಿ ಹಾಗೂ ಸಂಸದ ಶ್ರೀರಾಮುಲು ಅವರು ಇಂದು ನಗರದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಹರಕೆ ಸಲ್ಲಿಸಿದರು. 
 
ಬರಿಗಾಲಿನಲ್ಲಿ 1000 ಮೆಟ್ಟಿಲುಗಳನ್ನು ಏರುವ ಮೂಲಕ ಚಾಮುಂಡಿ ದೇವಿಯ ಹರಕೆ ತೀರಿಸಿದ ಇಬ್ಬರೂ ನಾಯಕರು, ತಮ್ಮ ಕುಟುಂಬ ಸದಸ್ಯರೊಂದಿಗೆ ಚಾಮುಂಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.  
 
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಜನಾರ್ಧನರೆಡ್ಡಿ, ನಮ್ಮ ತಂದೆ ತಾಯಿಗಳೂ ಮೊದಲು ಎರಡು ವರ್ಷಗಳ ಕಾಲ ಮೈಸೂರಿನಲ್ಲಿಯೇ ತಂಗಿದ್ದರು. ಆಗಿನಿಂದಲೂ ಕೂಡ ದೇವಿಯ ದರ್ಶನ ಪಡೆಯುತ್ತಿದ್ದು, ಪ್ರಸ್ತುತವೂ ಬಂದಿದ್ದೇನೆ. ಹರಕೆ ತೀರಿಸುವ ಸಲುವಾಗಿ ಬಂದಿದ್ದೇನೆಯೇ ಹೊರತು ಬೇರಾವ ಉದ್ದೇಶದಿಂದಲೂ ಅಲ್ಲ ಎಂದು ಸ್ಪಷ್ಟಪಡಿಸಿದರು. 
 
ಜನಾರ್ಧನರೆಡ್ಡಿಯವರಿಗೆ ಅವರ ಪತ್ನಿ ಹಾಗೂ ಪುತ್ರಿ ಸಾಥ್ ನೀಡಿದ್ದರು. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments