ಕಿಕ್ ಪ್ರಕರಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಕ್ಲೀನ್ಚಿಟ್ ನೀಡಿದೆ. ಮುಂದೆ ಮಾಜಿ ಸಚಿವ ಜನಾರ್ಧನ ರೆಡ್ಡಿಗೂ ಕೂಡ ಕ್ಲೀನ್ಚಿಟ್ ದೊರೆಯುವ ವಾತಾವರಣ ಇದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ದೇವೇಗೌಡರು ಕಿಡಿಕಾರಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಬಿಐ ಅಧಿಕಾರಿಗಳು ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಸಿಬಿಐ ತನಿಖೆಯಲ್ಲಿ ರಾಜಕೀಯ ವ್ಯಕ್ತಿಗಳು ಹಸ್ತಕ್ಷೇಪ ಮಾಡುವುದರಿಂದ ತನಿಖೆ ಸರಿಯಾದ ದಾರಿಯಲ್ಲಿ ನಡೆಯುವುದಿಲ್ಲ. ಈ ವಿಷಯ ಕೇವಲ ಬಿಜೆಪಿಯವರಿಗೆ ಮಾತ್ರವಲ್ಲ ಕಾಂಗ್ರೆಸ್ಸಿಗರಿಗೂ ಅನ್ವಯಿಸುತ್ತದೆ ಎಂದು ಗುಡುಗಿದರು.
ಕಾವೇರಿ ನದಿ ನೀರು ಹಂಚಿಕೆ ವಿವಾದದಲ್ಲಿ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ಕಾವೇರಿ ವಿವಾದ ಇತ್ಯರ್ಥಗೊಳಿಸಲು ಎರೆಡು ರಾಷ್ಟ್ರೀಯ ಪಕ್ಷಗಳು ವಿಫಲಾಗಿವೆ ಎಂದರು.
ರಾಜ್ಯದಲ್ಲಿ ತಮ್ಮ ಅಸ್ಥಿತ್ವ ಉಳಿಸಿಕೊಳ್ಳಲು ಮಾತ್ರ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ ಪ್ರಯತ್ನಿಸುತ್ತಿವೆ. ಆದರೆ, ಕಾವೇರಿ ವಿವಾದ ಇತ್ಯರ್ಥಗೊಳಿಸುವ ಕುರಿತು ಚಿಂತಿಸುತ್ತಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ದೇವೇಗೌಡರು ಆರೋಪಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ