Webdunia - Bharat's app for daily news and videos

Install App

ಜನಾರ್ದನ ರೆಡ್ಡಿ ಅಗ್ನಿ ಪರೀಕ್ಷೆ ಗೆದ್ದು ಮತ್ತೇ ತವರು ಮನೆಗೆ ವಾಪಾಸ್ಸಾಗಿದ್ದಾರೆ: ಬಿ.ಶ್ರೀರಾಮುಲು

Sampriya
ಸೋಮವಾರ, 25 ಮಾರ್ಚ್ 2024 (15:24 IST)
Photo Courtesy X
ಬೆಂಗಳೂರು: 12 ವರ್ಷಗಳ ನಂತರ ಬಿಜೆಪಿಗೆ ಸೇರ್ಪಡೆಗೊಂಡ ಶಾಸಕ ಜನಾರ್ದನ ರೆಡ್ಡಿ ವಾಪಾಸ್ಸಾದ ಬಗ್ಗೆ ಆಪ್ತ ಗೆಳೆಯ ಬಿ.ಶ್ರೀರಾಮುಲು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಮಾಧ್ಯಮದ ಜತೆ ಮಾತನಾಡಿದ ಅವರು, ಜನಾರ್ದನ ರೆಡ್ಡಿಗೆ ಬಿಜೆಪಿ ತವರು ಮನೆ ಇದ್ದ ಹಾಗೇ. ಮನೆ ಬಿಟ್ಟು ಹೋದ ಮಗ ಇಂದು ವಾಪಾಸ್ಸಾಗಿದ್ದಾರೆ. ಶ್ರೀರಾಮ ಚಂದ್ರ ಅಗ್ನಿಪರೀಕ್ಷೆ ನಂತರ ಹೇಗೆ ಮನೆಗೆ ವಾಪಾಸ್ಸಾಗಿದ್ದರು, ಹಾಗೆಯೇ ಜನಾರ್ದನ ರೆಡ್ಡಿ ಅವರು ಅಗ್ನಿ ಪರೀಕ್ಷೆಯನ್ನು ಗೆದ್ದು ಮತ್ತೇ ಮನೆಗೆ ವಾಪಾಸ್ಸಾಗಿದ್ದಾರೆ ಎಂದರು.

ಜನಾರ್ದನ ರೆಡ್ಡಿ ಮಾತನಾಡಿ, ಬಿಜೆಪಿ ಅನ್ನೋದು ನನ್ನ ರಕ್ತದ ಕಣ ಕಣದಲ್ಲಿದೆ. ಅನಿವಾರ್ಯ ಕಾರಣಗಳಿಂದ ನಾನು ಪಕ್ಷದ ಹೊರಗಡೆ ಹೋಗಬೇಕಾಯಿತು. ಇಂದು ನನ್ನ ಮನೆಗೆ ವಾಪಾಸ್ಸಾಗಿದ್ದೇನೆ ಎಂದರು.

ಇಂದು ಶಾಸಕ ಜನಾರ್ದನ ರೆಡ್ಡಿ ಅವರು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ವಿಜಯೇಂದ್ರ ಅವರು ಬಿಜೆಪಿ ಪಕ್ಷದ ಬಾವುಟ ನೀಡಿ ಜನಾರ್ದನ ರೆಡ್ಡಿ ಹಾಗೂ ಅವರ ಪತ್ನಿಯನ್ನು ಪಕ್ಷಕ್ಕೆ ಸ್ವಾಗತಿಸಿದರು. ಈ ವೇಳೆ ಬಿಜೆಪಿ ಹಿರಿಯ ನಾಯಕ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ಮುಖಂಡರು ಹಾಜರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಲ್ಲಿಕಾರ್ಜುನ ಖರ್ಗೆ ಪುತ್ರನ ಆರೋಗ್ಯ ಸ್ಥಿತಿ ಗಂಭೀರ

ಎಸ್ ಎಂ ಕೃಷ್ಣರಿಂದಾಗಿ ನನಗೆ ಸಿಎಂ ಸ್ಥಾನ ಸಿಗಲಿಲ್ಲ: ಮಲ್ಲಿಕಾರ್ಜುನ ಖರ್ಗೆ ಬೇಸರ

ಹೆಣ್ಮಕ್ಳು ಸೇಫ್ಟಿಗಾಗಿ ತಪ್ಪದೇ ಈ ಆಪ್ ಡೌನ್ ಲೋಡ್ ಮಾಡಿ

Karnataka Rains: ಈ ವಾರ ತಗ್ಗುತ್ತಾ ಮಳೆಯ ಅಬ್ಬರ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ಮುಂದಿನ ಸುದ್ದಿ
Show comments