Webdunia - Bharat's app for daily news and videos

Install App

ಜನಾರ್ದನ ರೆಡ್ಡಿ ಅಗ್ನಿ ಪರೀಕ್ಷೆ ಗೆದ್ದು ಮತ್ತೇ ತವರು ಮನೆಗೆ ವಾಪಾಸ್ಸಾಗಿದ್ದಾರೆ: ಬಿ.ಶ್ರೀರಾಮುಲು

Sampriya
ಸೋಮವಾರ, 25 ಮಾರ್ಚ್ 2024 (15:24 IST)
Photo Courtesy X
ಬೆಂಗಳೂರು: 12 ವರ್ಷಗಳ ನಂತರ ಬಿಜೆಪಿಗೆ ಸೇರ್ಪಡೆಗೊಂಡ ಶಾಸಕ ಜನಾರ್ದನ ರೆಡ್ಡಿ ವಾಪಾಸ್ಸಾದ ಬಗ್ಗೆ ಆಪ್ತ ಗೆಳೆಯ ಬಿ.ಶ್ರೀರಾಮುಲು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಮಾಧ್ಯಮದ ಜತೆ ಮಾತನಾಡಿದ ಅವರು, ಜನಾರ್ದನ ರೆಡ್ಡಿಗೆ ಬಿಜೆಪಿ ತವರು ಮನೆ ಇದ್ದ ಹಾಗೇ. ಮನೆ ಬಿಟ್ಟು ಹೋದ ಮಗ ಇಂದು ವಾಪಾಸ್ಸಾಗಿದ್ದಾರೆ. ಶ್ರೀರಾಮ ಚಂದ್ರ ಅಗ್ನಿಪರೀಕ್ಷೆ ನಂತರ ಹೇಗೆ ಮನೆಗೆ ವಾಪಾಸ್ಸಾಗಿದ್ದರು, ಹಾಗೆಯೇ ಜನಾರ್ದನ ರೆಡ್ಡಿ ಅವರು ಅಗ್ನಿ ಪರೀಕ್ಷೆಯನ್ನು ಗೆದ್ದು ಮತ್ತೇ ಮನೆಗೆ ವಾಪಾಸ್ಸಾಗಿದ್ದಾರೆ ಎಂದರು.

ಜನಾರ್ದನ ರೆಡ್ಡಿ ಮಾತನಾಡಿ, ಬಿಜೆಪಿ ಅನ್ನೋದು ನನ್ನ ರಕ್ತದ ಕಣ ಕಣದಲ್ಲಿದೆ. ಅನಿವಾರ್ಯ ಕಾರಣಗಳಿಂದ ನಾನು ಪಕ್ಷದ ಹೊರಗಡೆ ಹೋಗಬೇಕಾಯಿತು. ಇಂದು ನನ್ನ ಮನೆಗೆ ವಾಪಾಸ್ಸಾಗಿದ್ದೇನೆ ಎಂದರು.

ಇಂದು ಶಾಸಕ ಜನಾರ್ದನ ರೆಡ್ಡಿ ಅವರು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ವಿಜಯೇಂದ್ರ ಅವರು ಬಿಜೆಪಿ ಪಕ್ಷದ ಬಾವುಟ ನೀಡಿ ಜನಾರ್ದನ ರೆಡ್ಡಿ ಹಾಗೂ ಅವರ ಪತ್ನಿಯನ್ನು ಪಕ್ಷಕ್ಕೆ ಸ್ವಾಗತಿಸಿದರು. ಈ ವೇಳೆ ಬಿಜೆಪಿ ಹಿರಿಯ ನಾಯಕ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ಮುಖಂಡರು ಹಾಜರಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments