ಜನಾರ್ಧನ ರೆಡ್ಡಿ ವ್ಯಂಗ್ಯಕ್ಕೆ ದೇಶಪಾಂಡೆ ಟಾಂಗ್

Webdunia
ಬುಧವಾರ, 31 ಅಕ್ಟೋಬರ್ 2018 (15:11 IST)
ಮಾಜಿ ಸಿಎಂ ಸಿದ್ದರಾಮಯ್ಯನವರ ಪುತ್ರನ ಸಾವಿನ ಬಗ್ಗೆ ಜನಾರ್ದನ ರೆಡ್ಡಿ ಮಾಡಿರುವ ವ್ಯಂಗ್ಯಕ್ಕೆ ಕಂದಾಯ ಸಚಿವ ಆರ್. ವಿ. ದೇಶಪಾಂಡೆ ಅಸಮಾಧಾನ ವ್ಯಕ್ತಪಡಿಸಿದ್ದು, ರೆಡ್ಡಿಗೆ ಟಾಂಗ್ ನೀಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ  ಮಾತನಾಡಿರುವ ಆರ್.ವಿ.ದೇಶಪಾಂಡೆ, ಇಂತಹ ಹೇಳಿಕೆಯನ್ನ ಯಾರೇ ಆದರು ನೀಡಬಾರದು. ಪುತ್ರ ಶೋಕ ಅನ್ನುವುದು ತುಂಬಾ ನೋವಿನ ಸಂಗತಿ. ಇಂತಹ ವಿಷಯದಲ್ಲಿ ಟೀಕೆ ಮಾಡುವುದು ರಾಜಕೀಯವಾಗಿ ಒಳ್ಳೆಯ ಬೆಳವಣಿಗೆಯಲ್ಲ. ಉಪಚುನಾವಣೆಯಲ್ಲಿ ವ್ಯಕ್ತಿಗತ ಟೀಕೆಗೆ ರೆಡ್ಡಿ ಇಳಿದಿದ್ದಾರೆ.
ಇದು ಸಹ ಒಳ್ಳೆಯ ಬೆಳವಣಿಗೆಯಲ್ಲ ಎಂದಿದ್ದಾರೆ.

ಅಭಿವೃದ್ಧಿಯ ಬಗ್ಗೆ, ಕೆಲಸ ಆಗದಿರುವ ಬಗ್ಗೆ ಚರ್ಚಿಸಲಿ. ಅದನ್ನ ಬಿಟ್ಟು ವೈಯಕ್ತಿಕ ಟೀಕೆ ಸರಿಯಾದುದಲ್ಲ.
ಕುಮಾರ ಬಂಗಾರಪ್ಪ ಹೇಳಿಕೆ ನೀಡಿದ್ದು, ಮೀ ಟೂ  ವಿಷಯಕ್ಕೆ ಸಂಭಂದಿಸಿ ಮುಖ್ಯಮಂತ್ರಿ ಬಗ್ಗೆ ಮಾತನಾಡುವುದು ಸರಿಯಲ್ಲ. ಕುಮಾರ ಬಂಗಾರಪ್ಪಗೆ ರಾಜಕೀಯ ಭವಿಷ್ಯವಿದೆ. ಕುಮಾರ ಬೇಡವಾದ ಶಬ್ದಗಳನ್ನು ರಾಜಕೀಯವಾಗಿ ಬಳಸುವುದು ಸೂಕ್ತವಲ್ಲ ಎಂದರು.

ಉಪಚುನಾವಣೆಯಲ್ಲಿ ಐದು ಕ್ಷೇತ್ರದಲ್ಲೂ ಮೈತ್ರಿ ಪಕ್ಷಗಳು ಗೆಲುವನ್ನ ಸಾಧಿಸುತ್ತೇವೆ ಎಂದು ಗೆಲುವಿನ ವಿಶ್ವಾಸವನ್ನು ವ್ಯಕ್ತಪಡಿಸಿದರು ಆರ್. ವಿ. ದೇಶಪಾಂಡೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೈವೆಸಿಗೆ ಅಡ್ಡಿಯಾಗುತ್ತಾಳೆಂದು ಮಗಳನ್ನು ಮುಗಿಸಿದ ಮಲತಂದೆ ಕೊನೆಗೂ ಅರೆಸ್ಟ್‌

ಹಂಪಿಯಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಪತ್ತೆ, ಎಲ್ಲಿ ಗೊತ್ತಾ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮಹದೇವಪ್ಪರನ್ನು ಭೇಟಿಯಾಗಿ ನವೆಂಬರ್ ಕ್ರಾಂತಿ ಬಗ್ಗೆ ಪರಮೇಶ್ವರ್ ಸ್ಫೋಟಕ ಹೇಳಿಕೆ

Rain Alert, ದೇಶದ ಈ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಮುನ್ಸೂಚನೆ

ಮುಂದಿನ ಸುದ್ದಿ
Show comments