Publish Date: Sat, 07 Jan 2023 (09:24 IST)
Updated Date: Sat, 07 Jan 2023 (09:27 IST)
ರಾಯಚೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪನೆ ಬಳಿಕ ಮೊದಲ ಬಾರಿಗೆ ರಾಯಚೂರಿನ ಸಿಂಧನೂರಿನಲ್ಲಿ ಬಹಿರಂಗ ಸಮಾವೇಶ ನಡೆಸಿದ ಮಾಜಿ ಸಚಿವ ಜನಾರ್ದನ ರೆಡ್ಡಿ ರಾಜ್ಯದಲ್ಲಿನ ರಾಷ್ಟ್ರೀಯ ಪಕ್ಷಗಳು ತಲೆ ಬಾಗುವಂತೆ ಮಾಡುತ್ತೇನೆ ಎಂದು ಸವಾಲ್ ಹಾಕಿದ್ದಾರೆ.
ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷಗಳೂ ನನ್ನ ಗುರಿ. ಅದಕ್ಕಾಗಿ ಹಿಂದುಳಿದ 18 ರಿಂದ 20 ಜಿಲ್ಲೆಗಳಲ್ಲಿ ನಮ್ಮ ಅಭ್ಯರ್ಥಿಗಳನ್ನ ಕಣಕ್ಕಿಳಿಸುತ್ತೇವೆ. ನನ್ನ ಮಗಳು ತನ್ನೆಲ್ಲಾ ಕೆಲಸಗಳನ್ನ ಬಿಟ್ಟು ರಾಜಕೀಯಕ್ಕೆ ಬಂದಿದ್ದಾಳೆ.
ಪಕ್ಷವನ್ನ ಬಲ ಪಡಿಸಲು ತನ್ನೆಲ್ಲಾ ಕೆಲಸಗಳನ್ನ ಬಿಟ್ಟು ವಿದೇಶದಿಂದ ಬಂದಿದ್ದಾಳೆ. ನಮ್ಮ ಕುಟುಂಬದಿಂದ ಯರ್ಯಾರು ಚುನಾವಣೆಗೆ ಸ್ಪರ್ಧಿಸುತ್ತಾರೆ ಅನ್ನೋದನ್ನ ಶೀಘ್ರದಲ್ಲೇ ಬಹಿರಂಗ ಪಡಿಸುತ್ತೇನೆ ಎಂದು ಹೇಳಿದ್ದಾರೆ.