Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ ಪುತ್ರನ ಸಾವಿನ ಬಗ್ಗೆ ಮಾತನಾಡಿದಕ್ಕೆ ಕ್ಷಮೆ ಕೇಳುತ್ತೇನೆ ಎಂದ ಜನಾರ್ದನ ರೆಡ್ಡಿ

ಸಿದ್ದರಾಮಯ್ಯ ಪುತ್ರನ ಸಾವಿನ ಬಗ್ಗೆ ಮಾತನಾಡಿದಕ್ಕೆ ಕ್ಷಮೆ ಕೇಳುತ್ತೇನೆ ಎಂದ ಜನಾರ್ದನ ರೆಡ್ಡಿ
ಬೆಂಗಳೂರು , ಬುಧವಾರ, 31 ಅಕ್ಟೋಬರ್ 2018 (14:32 IST)
ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರನ ಸಾವಿನ ಬಗ್ಗೆ ಮಾತನಾಡಿದ ಜನಾರ್ದನ ರೆಡ್ಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಹಿನ್ನಲೆಯಲ್ಲಿ ಇದೀಗ ತಮ್ಮ ಹೇಳಿಕೆಯಿಂದ ನೋವಾಗಿದ್ರೆ ಕ್ಷಮೆ ಕೇಳುವುದಾಗಿ ಹೇಳಿದ್ದಾರೆ.


ನನ್ನ ಮಕ್ಕಳಿಗೆ 4 ವರ್ಷ ದೂರ ಇರುವಂತೆ ಸಿದ್ದರಾಮಯ್ಯ ಮಾಡಿದ್ದಾರೆ. ಶ್ರವಣ ಕುಮಾರ ಕೊಂದಾಗ ಪುತ್ರ ಅಗಲಿಕೆ ನೋವು ಗೊತ್ತಾಗಲಿ ಎಂದು ಹೆತ್ತವರು ಶಾಪ ಕೊಟ್ಟಿದ್ದರು. ನನ್ನನ್ನು ನನ್ನ ಮಕ್ಕಳಿಂದ ದೂರ ಮಾಡಿದ ಎಲ್ಲರೂ ಅನುಭವಿಸುತ್ತಾರೆ. ಕೆಟ್ಟವರಿಗೆ ಭಗವಂತ ಬುದ್ಧಿ ಕಲಿಸುತ್ತಾರೆ. ಅದೇ ರೀತಿ ಸಿದ್ದರಾಮಯ್ಯಗೆ ದೇವರು ಸರಿಯಾಗಿ ಬುದ್ದಿ ಕಲಿಸಿದ್ದಾನೆ ಎಂದು ರಾಕೇಶ್ ಸಾವನ್ನು ಪ್ರಸ್ತಾಪಿಸಿ ಜನಾರ್ದನ ರೆಡ್ಡಿ ಟೀಕಿಸಿದ್ದರು.


ಜನಾರ್ದನ ರೆಡ್ಡಿ ಅವರ ಈ ಹೇಳಿಕೆಯ ಬಗ್ಗೆ ಸಾರ್ವಜನಿಕರು ಮಾತ್ರವಲ್ಲದೇ ಬಿಜೆಪಿ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಇದೀಗ ಜನಾರ್ದನ ರೆಡ್ಡಿ ಕ್ಷಮೆ ಕೇಳುವುದಾಗಿ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಪುರಸಭೆ ಉಪಚುನಾವಣೆ: ಮಾಜಿ ಸಚಿವ ಗುತ್ತೇದಾರ್ ಬೆಂಬಲಿತ ಅಭ್ಯರ್ಥಿ ಗೆಲುವು