ನನ್ನ ಸಹಾಯಕ್ಕೆ ಯಾರೂ ಬರುತ್ತಿಲ್ಲ..! ಬಿಜೆಪಿ ಮೇಲೆ ಜನಾರ್ಧನ ರೆಡ್ಡಿ ಬೇಸರ

Webdunia
ಶುಕ್ರವಾರ, 16 ನವೆಂಬರ್ 2018 (09:33 IST)
ಬೆಂಗಳೂರು: ಆಂಬಿಡೆಂಟ್ ಕಂಪನಿ ಅವ್ಯವಹಾರ ಪ್ರಕರಣದಲ್ಲಿ ಬಂಧಿತರಾಗಿ ಜಾಮೀನಿನ ಮೇಲೆ ಬಿಡುಗಡೆಯಾದ ಮಾಜಿ ಸಚಿವ ಜನಾರ್ಧನ ರೆಡ್ಡಿ ತಮ್ಮ ಸಹಾಯಕ್ಕೆ ಬಿಜೆಪಿಯ ಯಾವೊಬ್ಬರು ನಾಯಕರೂ ಬರುತ್ತಿಲ್ಲ ಎಂದು ಬೇಸರಗೊಂಡಿದ್ದಾರಂತೆ.

ತಮ್ಮ ಬೇಸರವನ್ನು ರೆಡ್ಡಿ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎಂದು ಖಾಸಗಿ ವಾಹಿನಿಯೊಂದು ಅವರ ಆಪ್ತ ಮೂಲಗಳ ಹೇಳಿಕೆ ಉಲ್ಲೇಖಿಸಿ ವರದಿ ಮಾಡಿದೆ. ರೆಡ್ಡಿ ಜೈಲಿನಲ್ಲಿದ್ದಾಗ ಸ್ವತಃ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ರೆಡ್ಡಿ ಈಗ ಬಿಜೆಪಿಯಲ್ಲಿ ಇಲ್ಲ. ಹಾಗಾಗಿ ಅವರ ಬಗ್ಗೆ ನಾನೇನು ಕಾಮೆಂಟ್ ಮಾಡಲ್ಲ ಎಂದು ಜಾರಿಕೊಂಡಿದ್ದರು. ಹೀಗೆ ಪಕ್ಷದಲ್ಲಿ ಮೂಲೆಗುಂಪಾಗಿರುವುದಕ್ಕೆ ರೆಡ್ಡಿ ಬೇಸರಗೊಂಡಿದ್ದಾರೆ ಎನ್ನಲಾಗಿದೆ.

ಇನ್ನೊಂದೆಡೆ ತಮ್ಮ ಬಂಧನಕ್ಕೆ ಸಿಎಂ ಕುಮಾರಸ್ವಾಮಿಯವರ ಹನ್ನೆರಡು ವರ್ಷದ ಧ್ವೇಷವೇ ಕಾರಣ ಎಂದು ಜನಾರ್ಧನ ರೆಡ್ಡಿ ಹೇಳಿಕೊಂಡಿದ್ದರು. ಇದಕ್ಕೆ ತಿರುಗೇಟು ನೀಡಿರುವ ಸಿಎಂ ಕುಮಾರಸ್ವಾಮಿ ನಾನು ಸೇಡಿನ ರಾಜಕೀಯ ಮಾಡಿಲ್ಲ, ಅದರ ಅಗತ್ಯವೂ ನನಗಿಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments