Publish Date: Sun, 08 Apr 2018 (08:22 IST)
Updated Date: Sun, 08 Apr 2018 (08:24 IST)
ಬೆಂಗಳೂರು: ಫೆಬ್ರವರಿಯಲ್ಲಿ ಪ್ರಾರಂಭವಾದ ಕಾಂಗ್ರೆಸ್ ಜನಾಶೀರ್ವಾದ ಯಾತ್ರೆಗೆ ಇಂದು ವಿದ್ಯುಕ್ತ ತೆರೆ ಬೀಳಲಿದೆ. ಇದಕ್ಕಾಗಿ ಅರಮನೆ ಮೈದಾನ ಸಿದ್ಧಗೊಂಡಿದೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಜನಾಶೀರ್ವಾದ ಯಾತ್ರೆಯ ಸಮಾರೋಪ ಸಮಾರಂಭ ನಡೆಯಲಿದ್ದು, ಕಾಂಗ್ರೆಸ್ ನ ಘಟಾನುಘಟಿ ನಾಯಕರು ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಕ್ಕೆ ಈ ಸಮಾರಂಭ ನಡೆಯಲಿದೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್, ರಾಜ್ಯ ಉಸ್ತುವಾರಿ ಕೆಸಿ ವೇಣುಗೋಪಾಲ್ ಸೇರಿದಂತೆ ಬಹುತೇಕ ಕಾಂಗ್ರೆಸ್ ನಾಯಕರು ಇಂದಿನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.