Select Your Language

Notifications

webdunia
webdunia
webdunia
webdunia

ಜಂತಕಲ್‌ ಮೈನಿಂಗ್ ಪ್ರಕರಣ: ಎಸ್‌ಐಟಿಗೆ ಜನಾರ್ದನ ರೆಡ್ಡಿ ಮನವಿ

ಜಂತಕಲ್‌ ಮೈನಿಂಗ್ ಪ್ರಕರಣ: ಎಸ್‌ಐಟಿಗೆ ಜನಾರ್ದನ ರೆಡ್ಡಿ ಮನವಿ
ಬೆಂಗಳೂರು , ಬುಧವಾರ, 7 ಜೂನ್ 2017 (12:45 IST)
ಜಂತಕಲ್ ಮೈನಿಂಗ್ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ ಮಾಜಿ ಸಚಿವ ಜನಾರ್ದನ ರೆಡ್ಡಿ ಮನವಿ ಮಾಡಿದ್ದಾರೆ.
 
ಕೆಲ ವೈಯಕ್ತಿಕ ಕಾರಣಗಳಿಂದ ಇಂದು ವಿಶೇಷ ತನಿಖಾ ತಂಡದ ಎದುರು ಹಾಜರಾಗಲು ಸಾಧ್ಯವಿಲ್ಲ ಜೂನ್ 10 ರಂದು ಹಾಜರಾಗುವುದಾಗಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
 
ಜೂನ್ 10 ರಂದು ಕುಮಾರಸ್ವಾಮಿ ವಿರುದ್ಧದ ಆರೋಪಗಳನ್ನು ಪುಷ್ಠಿಕರಿಸುವ ಅಗತ್ಯವಾದ ದಾಖಲೆಗಳನ್ನು ಎಸ್‌ಐಟಿಗೆ ಒದಗಿಸುವುದಾಗಿ ತಿಳಿಸಿದ್ದಾರೆ.
 
ಕಳೆದ 2006ರಲ್ಲಿ ಮಾಜಿ ಸಿಎಂ, ಜೆಡಿಎಸ್, ರಾಜ್ಯಾಧ್ಯಕ್ಷ ಎಚ್.ಡಿ.ತುಮಾರಸ್ವಾಮಿ ಜಂತಕಲ್ ಮೈನಿಂಗ್‌ ಪ್ರಕರಣದಲ್ಲಿ 150 ಕೋಟಿ ರೂಪಾಯಿ ಲಂಚ ಪಡೆದಿದ್ದರು ಎಂದು ರೆಡ್ಡಿ ಆರೋಪಿಸಿದ್ದರು.  
 
ಮಾಜಿ ಸಚಿವ ಜನಾರ್ದನ ರೆಡ್ಡಿಯನ್ನು ಮತ್ತೊಮ್ಮೆ ವಿಚಾರಣೆ ನಡೆಸಿದ್ದ ಎಸ್‌ಐಟಿ ತಂಡ ಕುಮಾರಸ್ವಾಮಿ ವಿರುದ್ಧದ ಆರೋಪಗಳಿಗೆ ದಾಖಲೆಗಳನ್ನು ನೀಡುವಂತೆ ಸೂಚಿಸಿದ್ದರು.
 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಪ್ಲಾಸ್ಟಿಕ್ ಅಕ್ಕಿಯ ಅನ್ನದ ಉಂಡೆ ಮಾಡಿ ಕ್ರಿಕೆಟ್ ಆಡಿದ ಮಕ್ಕಳು