Select Your Language

Notifications

webdunia
webdunia
webdunia
webdunia

ಬೀದಿಗೆ ಬಂದ ಜಾರಕಿಹೊಳಿ ಸಹೋದರರ ಭಿನ್ನಮತ

ಬೀದಿಗೆ ಬಂದ ಜಾರಕಿಹೊಳಿ ಸಹೋದರರ ಭಿನ್ನಮತ
ಬೆಳಗಾವಿ , ಸೋಮವಾರ, 6 ಮಾರ್ಚ್ 2017 (14:35 IST)
ರಾಜಕೀಯದಲ್ಲಿ ಸಚಿವ ರಮೇಶ್ ಜಾರಕಿಹೊಳಿ ಪ್ರಬುದ್ಧರಾಗಿಲ್ಲ ಗೋಕಾಕ್‌ನಲ್ಲಿನ ಸ್ಟಂಟ್ ಬೆಳಗಾವಿ ಮತ್ತು ಬೆಂಗಳೂರಲ್ಲಿ ನಡೆಯೋಲ್ಲ ಎಂದು ಸಹೋದರ ಸಚಿವ ರಮೇಶ್ ಜಾರಕಿಹೊಳಿಗೆ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಟಾಂಗ್ ನೀಡಿದ್ದಾರೆ.
 
ನಾನು ನನ್ನ ಕ್ಷೇತ್ರವನ್ನು ಬದಲಿಸುವ ಪ್ರಶ್ನೆಯೇ ಇಲ್ಲ. ಯಾವುದೇ ಕಾರಣಕ್ಕೂ ರಾಯಚೂರು ಗ್ರಾಮೀಣ ಕ್ಷೇತ್ರದಿಂದ ಸ್ಪರ್ದಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
 
ರಮೇಶ್ ಜಾರಕಿಹೊಳೆಗೆ ಸುಧಾರಿಸಿಕೊಳ್ಳಲು ಕಾಲಾವಕಾಶವಿದೆ. ಸುಧಾರಿಸಿಕೊಂಡರೆ ಉತ್ತಮ. ನಾನು ಯಮಕನಮರಡಿ ಕ್ಷೇತ್ರವನ್ನು ಬೇರೆಯವರಿಗೆ ಬಿಟ್ಟುಕೊಡುವುದಿಲ್ಲ ಎಂದು ಗುಡುಗಿದ್ದಾರೆ. 
 
ಹಾಲಿ ಶಾಸಕರಿಗೆ ಟಿಕೆಟ್ ನೀಡುವುದು ಕಾಂಗ್ರೆಸ್ ಹೈಕಮಾಂಡ್ ಪದ್ದತಿ. ಲಖನ್ ಜಾರಕಿಹೊಳಿ ಸ್ಪರ್ಧೆಗೆ ಗೋಕಾಕ್ ಉತ್ತಮವಾಗಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸಿದರೆ ಬೆಂಬಲ ನೀಡುತ್ತೇನೆ ಎಂದು ಬೆಂಗಳೂರಿನಲ್ಲಿ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ವೃಷಣಗಳನ್ನೇ ಕತ್ತರಿಸಿ ಶಿವನಿಗರ್ಪಿಸಿದ... ಏಕೆ ಗೊತ್ತಾ?