Select Your Language

Notifications

webdunia
webdunia
webdunia
webdunia

ಜಾರಕಿಹೊಳಿ ಕಾಂಗ್ರೆಸ್ ಸಹವಾಸದಿಂದ ಹೀಗಾಗಿದೆ: ಬೊಮ್ಮಾಯಿ

ಜಾರಕಿಹೊಳಿ ಕಾಂಗ್ರೆಸ್ ಸಹವಾಸದಿಂದ ಹೀಗಾಗಿದೆ: ಬೊಮ್ಮಾಯಿ
ಬೆಳಗಾವಿ , ಗುರುವಾರ, 10 ನವೆಂಬರ್ 2022 (09:01 IST)
ಬೆಳಗಾವಿ : ಮಾತು ಆಡಿದರೆ ಹೋಯ್ತು, ಮುತ್ತು ಒಡೆದರೆ ಹೋಯ್ತು. ಶಾಸಕ ಸತೀಶ್ ಜಾರಕಿಹೊಳಿ ಅವರು ದುಡುಕುವವರಲ್ಲ, ಕಾಂಗ್ರೆಸ್ ಸಹವಾಸದಿಂದಾಗಿ ಅವರು ಈ ರೀತಿಯಾಗಿ ಮಾತನಾಡಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿಯವರು ಹೇಳಿಕೆ ನೀಡಿದರು.
 
ಹಿಂದೂ ಪದದ ಬಗ್ಗೆ ಸತೀಶ್ ಜಾರಕಿಹೊಳಿ ವಿವಾದಿತ ಹೇಳಿಕೆಯನ್ನು ಹಿಂಪಡೆದು ಸಿಎಂಗೆ ಪತ್ರ ಬರೆದ ವಿಚಾರಕ್ಕೆ ತಾಲೂಕಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ, ಜಾರಕಿಹೊಳಿ ಮಾತನಾಡುವುದು ಅಷ್ಟೇ ಅಲ್ಲ, ಸಮರ್ಥನೆ ಮಾಡುವ ಸಾಹಸ ಮಾಡಿದ್ದಾರೆ.

ಈಗ ವಿಷಾದ ವ್ಯಕ್ತಪಡಿಸಿದ್ದೀನಿ ಅನ್ನೋದು ಎಷ್ಟರ ಮಟ್ಟಿಗೆ ಸರಿ, ತಪ್ಪು ಎನ್ನುವುದನ್ನು ಅವರ ಆತ್ಮಸಾಕ್ಷಿಗೆ ಬಿಡುತ್ತೇನೆ. ನನಗೆ ಆಶ್ಚರ್ಯ ಆಗಿರುವಂತದ್ದು ಸತೀಶ್ ಜಾರಕಿಹೊಳಿ ದುಡುಕುವವರಲ್ಲ. ಕಾಂಗ್ರೆಸ್ ಸಹವಾಸದಿಂದ, ಕಾಂಗ್ರೆಸ್ನ ಸಂಸ್ಕೃತಿ ಪ್ರಭಾವದಿಂದ ಹೀಗಾಗಿದೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಝಲೋದ್ ಭವೇಶ್ ಕಟಾರಾ ಕಾಂಗ್ರೆಸ್ಗೆ ರಾಜೀನಾಮೆ