Webdunia - Bharat's app for daily news and videos

Install App

ಸಿಎಂ ಭೇಟಿಗೆ ಜಾರಕಿಹೋಳಿ ನಕಾರ: ಬೆಂಬಲಿಗರ ತಂಡ ಬೆಂಗಳೂರಿಗೆ

Webdunia
ಗುರುವಾರ, 29 ಜನವರಿ 2015 (11:35 IST)
ನಾನಾ ರೀತಿಯ ಕಾರಣಗಳನ್ನು ಹೇಳಿ ರಾಜೀನಾಮೆ ಸಲ್ಲಿಸಿದ್ದ ಅಬಕಾರಿ ಸಚಿವ ಸತೀಶ್ ಜಾರಕಿಹೋಳಿ ಅವರು ಸಿಎಂ ಭೇಟಿಗೆ ವೀರಾಕರಿಸಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ನ ಮುಖಂಡರು ಹಾಗೂ ಅವರ ಬೆಂಬಲಿಗರು ಇಂದು ರಾಜಧಾನಿಗೆ ಆಗಮಿಸುತ್ತಿದ್ದು, ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 
 
ಮೂಲಗಳ ಪ್ರಕಾರ, ಸಿಎಂ ಭೇಟಿಗೆ ಸಚಿವರು ನಿರಾಕರಿಸಿದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಇಂದು ಬೆಳಗ್ಗೆ ಬೆಳಗಾವಿಯಿಂದ ಹೊರಟಿದ್ದು, ಸಚಿವರ ಪರವಾಗಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ. 
 
ಇನ್ನು ಸಚಿವರ ಪರವಾಗಿ ಮಾತುಕತೆ ನಡೆಸಲು ಆಗಮಿಸುತ್ತಿರುವ ಅವರ ಬೆಂಬಲಿಗರು, ಹಲವು ಷರತ್ತುಗಳೊಂದಿಗೆ ನಗರಕ್ಕೆ ಆಗಮಿಸುತ್ತಿದ್ದಾರೆ. ಪ್ರಸ್ತುತ ಇರುವ ಅಬಕಾರಿ ಖಾತೆಯ ಜೊತೆಗೆ ಹೆಚ್ಚುವರಿ ಖಾತೆಯೊಂದನ್ನು ಕೊಡಬೇಕು. ಅದು ಸಂಪುಟ ವಿಸ್ತರಣೆ ವೇಳೆ ನೀಡುತ್ತಾರೋ ಅಥವಾ ಈಗಲೇ ನೀಡುತ್ತಾರೋ ಅದು ಸಿಎಂ ಹಾಗೂ ಪಕ್ಷದ ಹೈಕಮಾಂಡ್‌ಗೆ ಬಿಟ್ಟ ವಿಚಾರ. ಆದರೆ ನೀಡುವ ಬಗ್ಗೆ ಸ್ಪಷ್ಟನೆ ಹಾಗೂ ಭರವಸೆ ನೀಡಬೇಕು ಎಂಬುದೂ ಸೇರಿದಂತೆ ಇನ್ನಿತರೆ ಷರತ್ತುಗಳನ್ನು ಸಿಎಂ ಸಿದ್ದರಾಮಯ್ಯನವರ ಮೇಲೆ ಬೆಂಬಲಿಗರ ನಿಯೋಗ ಹೇರಲಿದೆ ಎಂದು ತಿಳಿದು ಬಂದಿದೆ.  

ಬೆಂಬಲಿಗರ ನಿಯೋಗದ ಬಗ್ಗೆ ಪ್ರತಿಕ್ರಿಯಿಸಿರುವ ಜಾರಕಿಹೋಳಿ, ಸಿಎಂ ಸಿದ್ದರಾಮಯ್ಯನವರನ್ನು ನಾನೇ ಖುದ್ದು ಭೇಟಿಯಾಗುವ ಅಗತ್ಯವಿಲ್ಲ. ಆದರೆ ನನ್ನ ಬೆಂಬಲಿಗರು ಸಿಎಂ ಸಿದ್ದರಾಮಯ್ಯನವರ ಜೊತೆಗಿನ ಮಾತುಕತೆಗೆಂದು ರಾಜಧಾನಿಗೆ ತೆರಳುತ್ತಿದ್ದು, ಅಲ್ಲಿ ನಡೆಯುವ ಮಾತುಕತೆಯಲ್ಲಿ ನಮ್ಮ ಷರತ್ತುಗಳಿಗೆ ಭರವಸೆ ಅಥವಾ ಪ್ರತಿಫಲ ಸಿಕ್ಕಿದ್ದೇ ಆದಲ್ಲಿ ಮಾತ್ರ ಮುಂದಿನ ಮುನ್ನಡೆ ಬಗ್ಗೆ ಚಿಂತಿಸಲಿದ್ದೇನೆ ಎಂದಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments