Webdunia - Bharat's app for daily news and videos

Install App

ಸಂಧಾನಕ್ಕೆ ತೆರಳಿದ್ದ ಕೆಂಪಯ್ಯಗೆ ಜಾರಕಿಹೋಳಿಯಿಂದ ತೀವ್ರ ತರಾಟೆ

Webdunia
ಬುಧವಾರ, 28 ಜನವರಿ 2015 (11:49 IST)
ಅಬಕಾರಿ ಸಚಿವ ಸತೀಶ್ ಜಾರಕಿಹೋಳಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ರಾಜೀನಾಮೆ ಹಿಂಪಡೆಯುವಂತೆ ಮನವೊಲಿಸಲು ತೆರಳಿದ್ದ ಗೃಹ ಸಚಿವ ಕೆ.ಜೆ.ಜಾರ್ಜ್ ಅವರ ವಿಶೇಷ ಸಲಹೆಗಾರ ಕಂಪಯ್ಯ ಅವರನ್ನು ಜಾರಕಿಹೋಳಿ ತೀವ್ರ ತರಾಟೆ ತೆಗೆದುಕೊಂಡಿದ್ದು, ನೀವೇನು ಕಾಂಗ್ರೆಸ್ ಹೈಕಮಾಂಡಾ, ನನ್ನ ರಾಜೀನಾಮೆ ಬಗ್ಗೆ ಕೇಳಲು ನೀವ್ಯಾರು ಎನ್ನುವ ಮೂಲಕ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. 
 
ಮಾಹಿತಿಗಳ ಪ್ರಕಾರ, ಜಾರಕಿಹೋಳಿ ಅವರು ತಮ್ಮ ರಾಜೀನಾಮೆ ಪತ್ರವನ್ನು ಹಿಂಪಡೆಯುವಂತೆ ಮನವೊಲಿಸುವ ಸಲುವಾಗಿ ಗೃಹ ಸಚಿವ ಕೆ.ಜೆ.ಜಾರ್ಜ್ ಅವರ ವಿಶೇಷ ಸಲಹೆಗಾರ ಕಂಪಯ್ಯನವರು ಇಂದು ಬೆಳಗ್ಗೆ ಜಾರಕಿ ಹೋಳಿ ಅವರ ಗೋಕಾಕ್ ನಗರದಲ್ಲಿನ ಸಚಿವರ ನಿವಾಸಕ್ಕೆ ತೆರಳಿ ಮನವೊಲಿಸಲು ಯತ್ನಿಸಿದರು. 
 
ಆದರೆ, ಕೆಂಪಯ್ಯನವರ ಮಾತಿಗೆ ಪ್ರತ್ಯುತ್ತರ ನೀಡಿದ ಸಚಿವ ಜಾರಕಿಹೋಳಿ, ನೀವೇನು ಕಾಂಗ್ರೆಸ್ ಹೈಕಮಾಂಡಾ, ನನ್ನ ರಾಜೀನಾಮೆ ಬಗ್ಗೆ ಕೇಳಲು ನೀವ್ಯಾರು, ನನ್ನ ವೈಯಕ್ತಿಕ ವಿಚಾರಗಳು ಸಾಕಷ್ಟಿವೆ. ಎಲ್ಲಾ ಸಮಸ್ಯೆಗಳನ್ನೂ ಕೂಡ ನೀವು ಬಗೆಹರಿಸಬಲ್ಲಿರಾ ಎನ್ನುವ ಮೂಲಕ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. 
 
ಅಬಕಾರಿ ಇಲಾಖಾ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದ ಸತೀಶ್ ಜಾರಕಿಹೋಳಿ, ನಿನ್ನೆ ಫ್ಯಾಕ್ಸ್ ಮೂಲಕ ಸಿಎಂ ಸಿದ್ದರಾಮಯ್ಯ ಹಾಗೂ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದರು. ಅಲ್ಲದೆ ನನಗೆ ವೈಯಕ್ತಿಕ ಸಮಸ್ಯೆಗಳಿದ್ದು, ಸಾಮಾಜಿಕ ಕಾರ್ಯದಲ್ಲಿ ತೊಡಗಲು ಸಚಿವ ಸ್ಥಾನ ಅಡ್ಡಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ನನ್ನ ರಾಜೀನಾಮೆ ಪತ್ರವನ್ನು ಅಂಗೀಕರಿಸಿ ಎಂದು ಮನವಿ ಮಾಡಿಕೊಂಡಿದ್ದರು.  
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments