Webdunia - Bharat's app for daily news and videos

Install App

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಗಾಗಿ ಕಾಲ್ನಡಿಗೆ ಜಾಥಾ..!

Webdunia
ಭಾನುವಾರ, 11 ಡಿಸೆಂಬರ್ 2022 (14:10 IST)
ಒಳ ಮೀಸಲಾತಿಗಾಗಿ ರಾಜ್ಯದ ಮೂಲೆ ಮೂಲೆಗಳಿಂದ ಬಂದಿರುವ ಮಾದಿಗ ಸಮುದಾಯದವರು ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಲು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.ಸಾವಿರಾರು ಸಂಖ್ಯೆಯಲ್ಲಿ ಕಾಲ್ನಡಿಗೆ ಬಂದ ಪ್ರತಿಭಟನಾಕಾರರಿಂದ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ.ದಾವಣಗೆರೆ, ಹರಿಹರದಿಂದ ಪ್ರೋ.ಬಿ. ಕೃಷ್ಣಪ್ಪರವರ ಸಮಾಧಿಯಿಂದ  ಕಾಲ್ನಡಿಗೆ ಜಾಥಾ ಮೂಲಕ ಪ್ರತಿಭಟನಾಕಾರರು ಫ್ರೀಡಂ ಪಾರ್ಕ್ ತಲುಪಿದಾರೆ.
 
ಪ್ರತಿಭಟನಾಕಾರರು ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿಯನ್ನು ರಾಜ್ಯ ಸರ್ಕಾರವು ಕೂಡಲೇ ಕೇಂದ್ರ ಸರ್ಕಾರ ಶಿಫಾರಸ್ಸು ಮಾಡುವುದು.ರಾಜ್ಯ ಸರ್ಕಾರಕ್ಕೆ ಇರುವ ಅಧಿಕಾರವನ್ನು ಉಪಯೋಗಿಸಿ ಪ್ರತ್ಯೇಕವಾಗಿ ಮಾದಿಗ- ಮಾದಿಗ ಸಂಬಂಧಿತ ಜಾತಿಗಳಿಗೆ ಶೇ6% ಮೀಸಲಾತಿಯನ್ನು ಮತ್ತು ಕಳೆದ ತಿಂಗಳು ನೀಡಿದಂತಹ ಶೇ 2%ಗೆ ಹೆಚ್ಚುವರಿ ಮೀಸಲಾತಿಯನ್ನು ನೀಡಿ ಮಸೂದೆಯನ್ನು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಶಿಫಾರಸ್ಸು ಮಾಡುವುದು.ಹಿಂದುಳಿದ ವರ್ಗಗಳ ಕಾಂತರಾಜು ವರದಿಯನ್ನು ಬಹಿರಂಗಮಾಡಿ ಯತ್ತವತ್ತಾಗಿ ಜಾರಿ ಮಾಡಬೇಕು.ಕರ್ನಾಟಕ ರಾಜ್ಯದಲ್ಲಿರುವ 43 ಸಾವಿರ ಪೌರಕಾರ್ಮಿಕರು ಮತ್ತು ವಾಹನ ಚಾಲಕರನ್ನ ಕಾಯಂಗೊಳಿಸುವುದು.ಪರಿಶಿಷ್ಟ ಜಾತಿಗಳ ಎಸ್ಸಿಪಿ/ಟಿಎಸ್ಸಿಪಿ ಅನುದಾನವನ್ನು ಮಾದಿಗ-ಮಾದಿಗ ಸಬಂಧಿತ ಅಲೆಮಾರಿ ಸಮುದಾಯಗಳಿಗೆ ಶೇ 6+1ರಂತೆ ಹಂಚಿಕೆ ಮಾಡಬೇಕು. ಕರ್ನಾಟಕ ಪೌರ ಕಾರ್ಮಿಕರು ಪಡೆದಿರುವ ಸಾಲ ಮನ್ನಾ ಮಾಡಬೇಕು ಮತ್ತು ಇತರೆ ಬೇಡಿಕೆಗಳನ್ನಿಟ್ಟು ಸಮಾವೇಶ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments