ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಗಾಗಿ ಕಾಲ್ನಡಿಗೆ ಜಾಥಾ..!

Webdunia
ಭಾನುವಾರ, 11 ಡಿಸೆಂಬರ್ 2022 (14:10 IST)
ಒಳ ಮೀಸಲಾತಿಗಾಗಿ ರಾಜ್ಯದ ಮೂಲೆ ಮೂಲೆಗಳಿಂದ ಬಂದಿರುವ ಮಾದಿಗ ಸಮುದಾಯದವರು ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಲು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.ಸಾವಿರಾರು ಸಂಖ್ಯೆಯಲ್ಲಿ ಕಾಲ್ನಡಿಗೆ ಬಂದ ಪ್ರತಿಭಟನಾಕಾರರಿಂದ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ.ದಾವಣಗೆರೆ, ಹರಿಹರದಿಂದ ಪ್ರೋ.ಬಿ. ಕೃಷ್ಣಪ್ಪರವರ ಸಮಾಧಿಯಿಂದ  ಕಾಲ್ನಡಿಗೆ ಜಾಥಾ ಮೂಲಕ ಪ್ರತಿಭಟನಾಕಾರರು ಫ್ರೀಡಂ ಪಾರ್ಕ್ ತಲುಪಿದಾರೆ.
 
ಪ್ರತಿಭಟನಾಕಾರರು ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿಯನ್ನು ರಾಜ್ಯ ಸರ್ಕಾರವು ಕೂಡಲೇ ಕೇಂದ್ರ ಸರ್ಕಾರ ಶಿಫಾರಸ್ಸು ಮಾಡುವುದು.ರಾಜ್ಯ ಸರ್ಕಾರಕ್ಕೆ ಇರುವ ಅಧಿಕಾರವನ್ನು ಉಪಯೋಗಿಸಿ ಪ್ರತ್ಯೇಕವಾಗಿ ಮಾದಿಗ- ಮಾದಿಗ ಸಂಬಂಧಿತ ಜಾತಿಗಳಿಗೆ ಶೇ6% ಮೀಸಲಾತಿಯನ್ನು ಮತ್ತು ಕಳೆದ ತಿಂಗಳು ನೀಡಿದಂತಹ ಶೇ 2%ಗೆ ಹೆಚ್ಚುವರಿ ಮೀಸಲಾತಿಯನ್ನು ನೀಡಿ ಮಸೂದೆಯನ್ನು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಶಿಫಾರಸ್ಸು ಮಾಡುವುದು.ಹಿಂದುಳಿದ ವರ್ಗಗಳ ಕಾಂತರಾಜು ವರದಿಯನ್ನು ಬಹಿರಂಗಮಾಡಿ ಯತ್ತವತ್ತಾಗಿ ಜಾರಿ ಮಾಡಬೇಕು.ಕರ್ನಾಟಕ ರಾಜ್ಯದಲ್ಲಿರುವ 43 ಸಾವಿರ ಪೌರಕಾರ್ಮಿಕರು ಮತ್ತು ವಾಹನ ಚಾಲಕರನ್ನ ಕಾಯಂಗೊಳಿಸುವುದು.ಪರಿಶಿಷ್ಟ ಜಾತಿಗಳ ಎಸ್ಸಿಪಿ/ಟಿಎಸ್ಸಿಪಿ ಅನುದಾನವನ್ನು ಮಾದಿಗ-ಮಾದಿಗ ಸಬಂಧಿತ ಅಲೆಮಾರಿ ಸಮುದಾಯಗಳಿಗೆ ಶೇ 6+1ರಂತೆ ಹಂಚಿಕೆ ಮಾಡಬೇಕು. ಕರ್ನಾಟಕ ಪೌರ ಕಾರ್ಮಿಕರು ಪಡೆದಿರುವ ಸಾಲ ಮನ್ನಾ ಮಾಡಬೇಕು ಮತ್ತು ಇತರೆ ಬೇಡಿಕೆಗಳನ್ನಿಟ್ಟು ಸಮಾವೇಶ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಹುಡುಕಿ ನಗರಕ್ಕೆ ಬಂದಿದ್ದ ಯುವಕ ಅನುಮಾನಸ್ಪದ ಸಾವು

ಬೆಳಗಾವಿ: ಮನೆಯಿಂದ ಕೊಳೆತ ವಾಸನೆ, ಬಾಗಿಲು ತೆರೆದಾಗ ಮಾಜಿ ಪತಿ ಪೊಲೀಸಪ್ಪನ ಕೃತ್ಯ ಬಟಾಬಯಲು

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು

ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ

ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪತ್ನಿ

ಮುಂದಿನ ಸುದ್ದಿ
Show comments