Webdunia - Bharat's app for daily news and videos

Install App

ಜಯಲಲಿತಾ ಸಾವಿನ ಪ್ರಕರಣ ತೀವ್ರಗೊಂಡ ವಿಚಾರಣೆ

Webdunia
ಶನಿವಾರ, 8 ಡಿಸೆಂಬರ್ 2018 (16:24 IST)
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ಎಐಎಡಿಎಂಕೆ ಅಧ್ಯಕ್ಷೆ ಜಯಲಲಿತಾ ಸಾವಿನ ಸುತ್ತ ಎದ್ದಿರುವ ಅನುಮಾನಗಳಿಗೆ ಅಂತ್ಯವಾಡಲು ರಚಿಸಿರುವ ಸಮಿತಿ ಇದೀಗ, ಶಶಿಕಲಾ ವಿಚಾರಣೆಗೆ ಸಿದ್ಧತೆ ನಡೆಸಿಕೊಂಡಿದೆ.

ಜಯಲಲಿತಾ ಪರಮಾಪ್ತೆಯಾಗಿದ್ದ ಶಶಿಕಲಾ, ಜಯಲಲಿತಾ ಆಸ್ಪತ್ರೆ ಸೇರಿದ 72 ದಿನಗಳ ಕಾಲ ಅವರೊಂದಿಗೆ ಆಸ್ಪತ್ರೆಯಲ್ಲಿದ್ದರು. ಆದ್ದರಿಂದ ಅವರ ವಿಚಾರಣೆ ಹಾಗೂ ಹೇಳಿಕೆ ಭಾರಿ ಮಹತ್ವ ಪಡೆದುಕೊಳ್ಳುವುದರಿಂದ, ಅರ್ಮುಗಂ ಸ್ವಾಮಿ ನೇತೃತ್ವದ ಸಮಿತಿ, ಶಶಿಕಲಾ ಅವರ ವಿಚಾರಣೆ ನಡೆಸಲು ಅನುಮತಿ ನೀಡುವಂತೆ ಕರ್ನಾಟಕ ಕಾರಾಗೃಹ ಇಲಾಖೆಗೆ ಪತ್ರ ಬರೆದಿದೆ.

ಇದರೊಂದಿಗೆ ಶಶಿಕಲಾ ವಿಚಾರಣೆಗೆ ಅಗತ್ಯ ವ್ಯವಸ್ಥೆ ಕಲ್ಪಿಸುವಂತೆ ತಮಿಳುನಾಡು ಗೃಹ ಇಲಾಖೆ ಕಾರ್ಯದರ್ಶಿಗೂ ಪತ್ರ ಬರೆದಿದೆ. ಅಕ್ರಮ ಆಸ್ತಿ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಶಶಿಕಲಾರನ್ನು ಶೀಘ್ರದಲ್ಲಿಯೇ ಭೇಟಿಯಾಗಿ ಹೇಳಿಕೆ ದಾಖಲಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ನಿಗೂಢ ಸಾವಿನ ತನಿಖೆ ನಡೆಸುತ್ತಿರುವ ಸಮಿತಿ ಇದೇ ಮೊದಲ ಬಾರಿಗೆ ಶಶಿಕಲಾ ಹೇಳಿಕೆ ದಾಖಲಿಸಿಕೊಳ್ಳಲು ಮುಂದಾಗಿದೆ. ಈಗಾಗಲೇ ಐಎಎಸ್, ಐಪಿಎಸ್ ಅಧಿಕಾರಿಗಳು ಸೇರಿದಂತೆ ಜಯಲಲಿತಾ ದಾಖಲಾಗಿದ್ದ ಆಪೊಲೋ ಆಸ್ಪತ್ರೆಯ ಸಿಬ್ಬಂದಿ ಹಾಗೂ ಜಯಲಲಿತಾ ಆರೈಕೆ ಮಾಡಿದ ಸಿಬ್ಬಂದಿ ಸೇರಿದಂತೆ ನೂರಕ್ಕೂ ಹೆಚ್ಚು ಜನರ ವಿಚಾರಣೆಯನ್ನು ಮಾಡಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲೆಕ್ಟ್ರಿಕ್ ಬೈಕ್‌ನಲ್ಲಿ ಇರುವಾಗಲೇ ಬ್ಯಾಟರಿ ಸ್ಫೋಟ, ಸಮಯಕ್ಕೆ ಸರಿಯಾಗಿ ದೂರ ಸರಿದಿದ್ದರಿಂದ ಉಳಿಯಿತು ಪ್ರಾಣ , Video

ಫ್ರಿಡ್ಜ್‌ನಲ್ಲಿ ಎತ್ತಿಟ್ಟ ರಸ್‌ಮಲೈ ತಿಂದ್ದಿದ್ದಕ್ಕೆ ಹೊಡೆದಾಡಿಕೊಂಡ ಅಣ್ಣ, ತಮ್ಮನ ಕುಟುಂಬ, ಆಸ್ಪತ್ರೆ ಸೇರಿದ ಇಬ್ಬರು

ಏರುತ್ತಿರುವ ಈರುಳ್ಳಿ, ಸಕ್ಕರೆ ಬೆಲೆ, ತುರ್ತು ಸಭೆ ಕರೆದ ಸಿಎಂ ರೇಖಾ ಗುಪ್ತಾ

SIR ಪ್ರಕ್ರಿಯೆಯು ಆತಂಕಕಾರಿ ಅಂಕಿಅಂಶಗಳನ್ನು ಹೊರತಂದಿದೆ: ಡಿಕೆ ಶಿವಕುಮಾರ್

ಅವಧಿ ಮುಗಿದ ಚಾಕೋಲೇಟ್ ತಿನ್ನಕ್ಕೆ ಯೋಗ್ಯವಲ್ಲವೆಂದು ಕಸದ ರಾಶಿಗೆ ಎಸೆದ್ರೆ, ಈ ಜನ ಹೇಗೇ ನಡೆದುಕೊಂಡ್ರು ನೋಡಿ, Video

ಮುಂದಿನ ಸುದ್ದಿ
Show comments