Webdunia - Bharat's app for daily news and videos

Install App

ಜಯಲಲಿತಾ ಸಾವಿನ ಪ್ರಕರಣ ತೀವ್ರಗೊಂಡ ವಿಚಾರಣೆ

Webdunia
ಶನಿವಾರ, 8 ಡಿಸೆಂಬರ್ 2018 (16:24 IST)
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ಎಐಎಡಿಎಂಕೆ ಅಧ್ಯಕ್ಷೆ ಜಯಲಲಿತಾ ಸಾವಿನ ಸುತ್ತ ಎದ್ದಿರುವ ಅನುಮಾನಗಳಿಗೆ ಅಂತ್ಯವಾಡಲು ರಚಿಸಿರುವ ಸಮಿತಿ ಇದೀಗ, ಶಶಿಕಲಾ ವಿಚಾರಣೆಗೆ ಸಿದ್ಧತೆ ನಡೆಸಿಕೊಂಡಿದೆ.

ಜಯಲಲಿತಾ ಪರಮಾಪ್ತೆಯಾಗಿದ್ದ ಶಶಿಕಲಾ, ಜಯಲಲಿತಾ ಆಸ್ಪತ್ರೆ ಸೇರಿದ 72 ದಿನಗಳ ಕಾಲ ಅವರೊಂದಿಗೆ ಆಸ್ಪತ್ರೆಯಲ್ಲಿದ್ದರು. ಆದ್ದರಿಂದ ಅವರ ವಿಚಾರಣೆ ಹಾಗೂ ಹೇಳಿಕೆ ಭಾರಿ ಮಹತ್ವ ಪಡೆದುಕೊಳ್ಳುವುದರಿಂದ, ಅರ್ಮುಗಂ ಸ್ವಾಮಿ ನೇತೃತ್ವದ ಸಮಿತಿ, ಶಶಿಕಲಾ ಅವರ ವಿಚಾರಣೆ ನಡೆಸಲು ಅನುಮತಿ ನೀಡುವಂತೆ ಕರ್ನಾಟಕ ಕಾರಾಗೃಹ ಇಲಾಖೆಗೆ ಪತ್ರ ಬರೆದಿದೆ.

ಇದರೊಂದಿಗೆ ಶಶಿಕಲಾ ವಿಚಾರಣೆಗೆ ಅಗತ್ಯ ವ್ಯವಸ್ಥೆ ಕಲ್ಪಿಸುವಂತೆ ತಮಿಳುನಾಡು ಗೃಹ ಇಲಾಖೆ ಕಾರ್ಯದರ್ಶಿಗೂ ಪತ್ರ ಬರೆದಿದೆ. ಅಕ್ರಮ ಆಸ್ತಿ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಶಶಿಕಲಾರನ್ನು ಶೀಘ್ರದಲ್ಲಿಯೇ ಭೇಟಿಯಾಗಿ ಹೇಳಿಕೆ ದಾಖಲಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ನಿಗೂಢ ಸಾವಿನ ತನಿಖೆ ನಡೆಸುತ್ತಿರುವ ಸಮಿತಿ ಇದೇ ಮೊದಲ ಬಾರಿಗೆ ಶಶಿಕಲಾ ಹೇಳಿಕೆ ದಾಖಲಿಸಿಕೊಳ್ಳಲು ಮುಂದಾಗಿದೆ. ಈಗಾಗಲೇ ಐಎಎಸ್, ಐಪಿಎಸ್ ಅಧಿಕಾರಿಗಳು ಸೇರಿದಂತೆ ಜಯಲಲಿತಾ ದಾಖಲಾಗಿದ್ದ ಆಪೊಲೋ ಆಸ್ಪತ್ರೆಯ ಸಿಬ್ಬಂದಿ ಹಾಗೂ ಜಯಲಲಿತಾ ಆರೈಕೆ ಮಾಡಿದ ಸಿಬ್ಬಂದಿ ಸೇರಿದಂತೆ ನೂರಕ್ಕೂ ಹೆಚ್ಚು ಜನರ ವಿಚಾರಣೆಯನ್ನು ಮಾಡಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments