ಜಯಲಲಿತಾ ಸಾವಿನ ಪ್ರಕರಣ ತೀವ್ರಗೊಂಡ ವಿಚಾರಣೆ

Webdunia
ಶನಿವಾರ, 8 ಡಿಸೆಂಬರ್ 2018 (16:24 IST)
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ಎಐಎಡಿಎಂಕೆ ಅಧ್ಯಕ್ಷೆ ಜಯಲಲಿತಾ ಸಾವಿನ ಸುತ್ತ ಎದ್ದಿರುವ ಅನುಮಾನಗಳಿಗೆ ಅಂತ್ಯವಾಡಲು ರಚಿಸಿರುವ ಸಮಿತಿ ಇದೀಗ, ಶಶಿಕಲಾ ವಿಚಾರಣೆಗೆ ಸಿದ್ಧತೆ ನಡೆಸಿಕೊಂಡಿದೆ.

ಜಯಲಲಿತಾ ಪರಮಾಪ್ತೆಯಾಗಿದ್ದ ಶಶಿಕಲಾ, ಜಯಲಲಿತಾ ಆಸ್ಪತ್ರೆ ಸೇರಿದ 72 ದಿನಗಳ ಕಾಲ ಅವರೊಂದಿಗೆ ಆಸ್ಪತ್ರೆಯಲ್ಲಿದ್ದರು. ಆದ್ದರಿಂದ ಅವರ ವಿಚಾರಣೆ ಹಾಗೂ ಹೇಳಿಕೆ ಭಾರಿ ಮಹತ್ವ ಪಡೆದುಕೊಳ್ಳುವುದರಿಂದ, ಅರ್ಮುಗಂ ಸ್ವಾಮಿ ನೇತೃತ್ವದ ಸಮಿತಿ, ಶಶಿಕಲಾ ಅವರ ವಿಚಾರಣೆ ನಡೆಸಲು ಅನುಮತಿ ನೀಡುವಂತೆ ಕರ್ನಾಟಕ ಕಾರಾಗೃಹ ಇಲಾಖೆಗೆ ಪತ್ರ ಬರೆದಿದೆ.

ಇದರೊಂದಿಗೆ ಶಶಿಕಲಾ ವಿಚಾರಣೆಗೆ ಅಗತ್ಯ ವ್ಯವಸ್ಥೆ ಕಲ್ಪಿಸುವಂತೆ ತಮಿಳುನಾಡು ಗೃಹ ಇಲಾಖೆ ಕಾರ್ಯದರ್ಶಿಗೂ ಪತ್ರ ಬರೆದಿದೆ. ಅಕ್ರಮ ಆಸ್ತಿ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಶಶಿಕಲಾರನ್ನು ಶೀಘ್ರದಲ್ಲಿಯೇ ಭೇಟಿಯಾಗಿ ಹೇಳಿಕೆ ದಾಖಲಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ನಿಗೂಢ ಸಾವಿನ ತನಿಖೆ ನಡೆಸುತ್ತಿರುವ ಸಮಿತಿ ಇದೇ ಮೊದಲ ಬಾರಿಗೆ ಶಶಿಕಲಾ ಹೇಳಿಕೆ ದಾಖಲಿಸಿಕೊಳ್ಳಲು ಮುಂದಾಗಿದೆ. ಈಗಾಗಲೇ ಐಎಎಸ್, ಐಪಿಎಸ್ ಅಧಿಕಾರಿಗಳು ಸೇರಿದಂತೆ ಜಯಲಲಿತಾ ದಾಖಲಾಗಿದ್ದ ಆಪೊಲೋ ಆಸ್ಪತ್ರೆಯ ಸಿಬ್ಬಂದಿ ಹಾಗೂ ಜಯಲಲಿತಾ ಆರೈಕೆ ಮಾಡಿದ ಸಿಬ್ಬಂದಿ ಸೇರಿದಂತೆ ನೂರಕ್ಕೂ ಹೆಚ್ಚು ಜನರ ವಿಚಾರಣೆಯನ್ನು ಮಾಡಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಣಿಪುರದಲ್ಲಿ ಕೊನೆಗೂ ರಾಷ್ಟ್ರಪತಿ ಆಳ್ವಿಕೆ ಅಂತ್ಯ, ಸಿಎಂ ಆಗಿ ಯುಮ್ನಾಮ್

ರಾಜ್ಯದ ಜನರಿಗೆ ನಿಮ್ಮ ಸರಣಿ ಹಗರಣ, ಆಡಳಿತ ವೈಫಲ್ಯಗಳ ದರ್ಶನವಾಗಲಿ

ಕಳೆದೊಂದು ವರ್ಷದಲ್ಲಿ ದ.ಕ, ಉಡುಪಿ ಜಿಲ್ಲೆಗಳಲ್ಲಿ ರಸ್ತೆ ಅಪಘಾತಕ್ಕೆ ಅಮೂಲ್ಯ ಜೀವಗಳು ಬಲಿಯಾಗಿದೆಷ್ಟು ಗೊತ್ತಾ

ಕಾಂಗ್ರೆಸ್ ಪಕ್ಷದ ಲಿಂಗಾಯತ ಶಾಸಕರ ಸಭೆ ಬಗ್ಗೆ ಎಂಬಿ ಪಾಟೀಲ್ ಸ್ಫೋಟಕ ಮಾಹಿತಿ

ಸದನದಲ್ಲಿ ರೊಚ್ಚಿಗೆದ್ದ ಶಿವಲಿಂಗೇಗೌಡ, ಅಧಿಕಾರದ ಅಮಲಿನಲ್ಲಿ ಶಾಸಕನ ಗೂಂಡಾ ವರ್ತನೆ

ಮುಂದಿನ ಸುದ್ದಿ
Show comments