Webdunia - Bharat's app for daily news and videos

Install App

ನೀವು ಬದುಕಿರುವವರೆಗೂ ಶಾಸಕರಾಗಿರುತ್ತೀರಿ ಎಂದು ಸಚಿವೆ ಜಯಮಾಲ ಹೇಳಿದ್ದು ಯಾರಿಗೆ ಗೊತ್ತಾ?

Webdunia
ಸೋಮವಾರ, 5 ನವೆಂಬರ್ 2018 (12:34 IST)
ಹಾಸನ : ಸಚಿವೆ ಹಾಗೂ ಹಿರಿಯ ನಟಿ ಜಯಮಾಲಾ, ಅವರು “ನೀವು ಇರೋವರೆಗೂ ಸೋಲುವುದೇ ಇಲ್ಲ. ಕೊನೆಯವರೆಗೂ ಶಾಸಕರಾಗಿರುತ್ತೀರಿ” ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ಅವರನ್ನು ಹಾಡಿ ಹೊಗಳಿ ಅಟ್ಟಕ್ಕೇರಿಸಿದ್ದಾರೆ.


ಸಚಿವೆ ಜಯಮಾಲ ಅವರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಜೈನಮಠದಲ್ಲಿ ಮಾತನಾಡಿ,’ ಹಾಸನದಲ್ಲಿ ಶುಚಿತ್ವಕ್ಕೆ ರೇವಣ್ಣ ಅವರು ನೀಡಿರುವ ಆದ್ಯತೆಯನ್ನು ಎಲ್ಲ ಕಡೆ ಜನರು ಮಾತನಾಡುತ್ತಿದ್ದಾರೆ. ಜನರು ಏನೂ ಕೇಳದೇ ಇದ್ದರೂ ಅವರಿಗೆ ಬೇಕಾದುದನ್ನು ಅರ್ಥೈಸಿಕೊಂಡು ರೇವಣ್ಣ ಅವರೇ ಒಂದು ಸಾಮ್ರಾಜ್ಯ ನಿರ್ಮಾಣ ಮಾಡಿದ್ದಾರೆ’ ಎಂದು ರೇವಣ್ಣ ಅವರನ್ನು ಹೊಗಳಿದ್ದಾರೆ.


ಹಾಗೇ ‘ಹಾಸನ ಜಿಲ್ಲೆ ನೋಡಿದಾಗ ಅವರ ಶ್ರಮದ ದರ್ಶನವಾಗಲಿದೆ. ಯಾವುದೇ ಸರ್ಕಾರವಿರಲಿ, ವಿಧಾನಸೌಧದಲ್ಲಿ ಇಂಥ ಕೆಲಸ ನಮ್ಮ ಜಿಲ್ಲೆಗೆ ಆಗಬೇಕು ಎಂದು ಏಕೆ ಪಟ್ಟು ಹಿಡಿಯುತ್ತಾರೆ ಎಂಬುದು ನನಗೀಗ ಅರ್ಥವಾಗಿದೆ. ಹೀಗಾಗಿ ರೇವಣ್ಣ ಅವರು ಬದುಕಿರುವವರೆಗೂ ಶಾಸಕರಾಗಿರುತ್ತಾರೆ’ ಎಂದು ಜಯಮಾಲ ಅವರು ಭವಿಷ್ಯ ನುಡಿದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments