Webdunia - Bharat's app for daily news and videos

Install App

ರಾಜಧಾನಿಯ ಜಯನಗರ ವಾಣಿಜ್ಯ ಸಂಕೀರ್ಣದ ಹೊಸ ಕಟ್ಟಡದ ಕಾಮಗಾರಿ ಶೀಘ್ರದಲ್ಲೆ ಪೂರ್ಣ

Webdunia
ಭಾನುವಾರ, 18 ಜುಲೈ 2021 (20:13 IST)
ಬೆಂಗಳೂರು: ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಜಯನಗರ ವಾಣಿಜ್ಯ ಸಂಕೀರ್ಣದ ಕಟ್ಟಡದ ನೀಲಿನಕ್ಷೆಯನ್ನು ಪರಿಶೀಲಿಸಿ, ಶೀಘ್ರದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.
 
ಜಯನಗರ ವಿಧಾನಸಭಾ ಕ್ಷೇತ್ರ ,ನಾಲ್ಕನೇಯ ಬ್ಲಾಕ್ ನ ಪ್ರಸಿದ್ಧ ಜಯನಗರ ವಾಣಿಜ್ಯ ಸಂಕೀರ್ಣಕ್ಕೆ (ಕಾಂಪ್ಲೆಕ್ಸ್) ಶನಿವಾರ ಶಾಸಕಿ ಸೌಮ್ಯರೆಡ್ಡಿ, ಮುಖ್ಯ ಆಯುಕ್ತ  ಗೌರವ್ ಗುಪ್ತಾ, ವಿಶೇಷ ಆಯುಕ್ತೆ ತುಳಸಿ ಮದ್ದಿನೇನಿ ಮತ್ತು ಮಾಜಿ ಆಡಳಿತ ಪಕ್ಷದ ನಾಯಕ ಎನ್.ನಾಗರಾಜ್  ಅಧಿಕಾರಿಗಳ ಜೊತೆಯಲ್ಲಿ ಭೇಟಿ ನೀಡಿ , ವಾಣಿಜ್ಯ ಸಂಕೀರ್ಣವನ್ನು ಪರಿಶೀಲನೆ ಮಾಡಿದರು.
 
ಶಾಸಕಿ ಸೌಮ್ಯರೆಡ್ಡಿ  ಮಾತನಾಡಿ ಜಯನಗರ ವಾಣಿಜ್ಯ ಸಂಕೀರ್ಣ ಬೆಂಗಳೂರಿನ ಪ್ರತಿಷ್ಟಿತ ಶಾಪಿಂಗ್ ಮಾಲ್ ಆಗಿತ್ತು. ಕಳೆದ ಆರು ವರ್ಷಗಳಲ್ಲಿ ವಾಣಿಜ್ಯ ಕಟ್ಟಡ ಆಧುನಿಕರಣ ಮಾಡಲು ಯೋಜನೆ ರೂಪಿಸಿ ,ಕಾಮಗಾರಿ ನಿಧಾನಗತಿಯಿಂದ ಸಾರ್ವಜನಿಕರಿಗೆ ಬಳಕೆಯಾಗದೇ  ಅನುಪಯುಕ್ತವಾಗಿದೆ .ಕೊಡಲೆ ಮುಖ್ಯ ಆಯುಕ್ತರು ಗಮನಹರಿಸಿ ಜಯನಗರ ವಾಣಿಜ್ಯ ಸಂಕೀರ್ಣದ (ಕಾಂಪ್ಲೆಕ್ಸ್) ಕಾಮಗಾರಿ ಅತಿಶೀಘ್ರದಲ್ಲಿ ಪೂರ್ಣಗೊಳಿಸಿ. ವಾಣಿಜ್ಯ ಸಂಕೀರ್ಣದ ಮಳಿಗೆದಾರರಿಗೆ ಪರ್ಯಾಯ ವ್ಯವಸ್ಥೆ ಯನ್ನು ಮಾಡಿಕೊಡಬೇಕೆಂದು ಗೌರವ್ ಗುಪ್ತಾ ರಿಗೆ ಮನವಿ ಮಾಡಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments