Webdunia - Bharat's app for daily news and videos

Install App

ರಾಜಧಾನಿಯ ಜಯನಗರ ವಾಣಿಜ್ಯ ಸಂಕೀರ್ಣದ ಹೊಸ ಕಟ್ಟಡದ ಕಾಮಗಾರಿ ಶೀಘ್ರದಲ್ಲೆ ಪೂರ್ಣ

Webdunia
ಭಾನುವಾರ, 18 ಜುಲೈ 2021 (20:13 IST)
ಬೆಂಗಳೂರು: ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಜಯನಗರ ವಾಣಿಜ್ಯ ಸಂಕೀರ್ಣದ ಕಟ್ಟಡದ ನೀಲಿನಕ್ಷೆಯನ್ನು ಪರಿಶೀಲಿಸಿ, ಶೀಘ್ರದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.
 
ಜಯನಗರ ವಿಧಾನಸಭಾ ಕ್ಷೇತ್ರ ,ನಾಲ್ಕನೇಯ ಬ್ಲಾಕ್ ನ ಪ್ರಸಿದ್ಧ ಜಯನಗರ ವಾಣಿಜ್ಯ ಸಂಕೀರ್ಣಕ್ಕೆ (ಕಾಂಪ್ಲೆಕ್ಸ್) ಶನಿವಾರ ಶಾಸಕಿ ಸೌಮ್ಯರೆಡ್ಡಿ, ಮುಖ್ಯ ಆಯುಕ್ತ  ಗೌರವ್ ಗುಪ್ತಾ, ವಿಶೇಷ ಆಯುಕ್ತೆ ತುಳಸಿ ಮದ್ದಿನೇನಿ ಮತ್ತು ಮಾಜಿ ಆಡಳಿತ ಪಕ್ಷದ ನಾಯಕ ಎನ್.ನಾಗರಾಜ್  ಅಧಿಕಾರಿಗಳ ಜೊತೆಯಲ್ಲಿ ಭೇಟಿ ನೀಡಿ , ವಾಣಿಜ್ಯ ಸಂಕೀರ್ಣವನ್ನು ಪರಿಶೀಲನೆ ಮಾಡಿದರು.
 
ಶಾಸಕಿ ಸೌಮ್ಯರೆಡ್ಡಿ  ಮಾತನಾಡಿ ಜಯನಗರ ವಾಣಿಜ್ಯ ಸಂಕೀರ್ಣ ಬೆಂಗಳೂರಿನ ಪ್ರತಿಷ್ಟಿತ ಶಾಪಿಂಗ್ ಮಾಲ್ ಆಗಿತ್ತು. ಕಳೆದ ಆರು ವರ್ಷಗಳಲ್ಲಿ ವಾಣಿಜ್ಯ ಕಟ್ಟಡ ಆಧುನಿಕರಣ ಮಾಡಲು ಯೋಜನೆ ರೂಪಿಸಿ ,ಕಾಮಗಾರಿ ನಿಧಾನಗತಿಯಿಂದ ಸಾರ್ವಜನಿಕರಿಗೆ ಬಳಕೆಯಾಗದೇ  ಅನುಪಯುಕ್ತವಾಗಿದೆ .ಕೊಡಲೆ ಮುಖ್ಯ ಆಯುಕ್ತರು ಗಮನಹರಿಸಿ ಜಯನಗರ ವಾಣಿಜ್ಯ ಸಂಕೀರ್ಣದ (ಕಾಂಪ್ಲೆಕ್ಸ್) ಕಾಮಗಾರಿ ಅತಿಶೀಘ್ರದಲ್ಲಿ ಪೂರ್ಣಗೊಳಿಸಿ. ವಾಣಿಜ್ಯ ಸಂಕೀರ್ಣದ ಮಳಿಗೆದಾರರಿಗೆ ಪರ್ಯಾಯ ವ್ಯವಸ್ಥೆ ಯನ್ನು ಮಾಡಿಕೊಡಬೇಕೆಂದು ಗೌರವ್ ಗುಪ್ತಾ ರಿಗೆ ಮನವಿ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮೀನು ಒತ್ತುವರಿ ಪ್ರಕರಣ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಕುಮಾರಸ್ವಾಮಿಗೆ ಬಿಗ್ ರಿಲೀಫ್‌

ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳ ಡಿಎನ್‌ಎ ಟೆಸ್ಟ್‌ಗೆ ಮುಂದಾದ ಪಂಜಾಬ್ ಸರ್ಕಾರ

ಶುಭಾಂಶು ಶುಕ್ಲಾ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಇಸ್ರೋ

Viral Video, ಪಾಟ್ನಾ: ಹಾಡಹಗಲೇ ಆಸ್ಪತ್ರೆಯೊಳಗೆ ನುಗ್ಗಿ ಕೊಲೆ ಆರೋಪಿಯನ್ನು ಗುಂಡಿಕ್ಕಿ ಕೊಂದ ಐವರ ಗುಂಪು

ಬಿಜೆಪಿ ಶಾಸಕರನ್ನು ಕಾಂಗ್ರೆಸ್ ಟಾರ್ಗೆಟ್ ಮಾಡ್ತಿದೆ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments