Webdunia - Bharat's app for daily news and videos

Install App

ರಾಜ್ಯದಲ್ಲಿರುವುದು ಜೆಸಿಬಿ ಸರ್ಕಾರ: ಸುರೇಶ್ ಕುಮಾರ್

Webdunia
ಸೋಮವಾರ, 4 ಮೇ 2015 (16:06 IST)
ಸರ್ಕಾರವು ನಗರದಲ್ಲಿನ ಸರ್ಕಾರಿ ಹಾಗೂ ಕೆರೆ ಒತ್ತುವರಿ ಭೂಮಿಯ ತೆರವಿಗೆ ಮುಂದಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಸುರೇಶ್ ಕುಮಾರ್ ಅವರು ಪ್ರತಿಕ್ರಿಯಿಸಿದ್ದು, ನಮ್ಮ ರಾಜ್ಯದಲ್ಲಿರುವುದು ಜೆಸಿಬಿ ಅಥವಾ ಬುಲ್ಡೋಜರ್ ಸರ್ಕಾರ ಎಂದು ಸಿಎಂ ಸಿದ್ದರಾಮಯ್ಯ ಸರ್ಕಾರವನ್ನು ಟೀಕಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರವು ಕೆರೆ ಒತ್ತುವರಿಯಾಗಿದೆ ಎಂಬ ಸಬೂಬನ್ನು ಹೇಳಿಕೊಂಡು ಸಾರ್ವಜನಿಕರಿಗೆ ಅನ್ಯಾಯ ಎಸಗಲು ಮುಂದಾಗಿದೆ. ಸರ್ಕಾರದ ಈ ಕ್ರಮ ಸರಿಯಲ್ಲ ಎಂದ ಅವರು, ನಗರದಲ್ಲಿರುವ ಕೆಂಪೇಗೌಡ ಬಸ್ ನಿಲ್ದಾಣ, ರಾಜ್ಯ ಪರಿಸರ ನಿಯಂತ್ರಣಾ ಇಲಾಖೆ, ಅಷ್ಟೇ ಅಲ್ಲದೆ ಕೆಪಿಸಿಸಿ ಕಚೇರಿಯೂ ಕೂಡ ಕೆರೆಯ ಜಾಗದಲ್ಲಿಯೇ ಇವೆ. ಅವುಗಳನ್ನು ಮತ್ತೆ ಕೆರೆ ಜಾಗವೆಂದು ಬಿಟ್ಟುಕೊಡಲು ಸರ್ಕಾರ ಸಿದ್ಧವಿದೆಯೇ ಎಂದು ಪ್ರಶ್ನಿಸಿದರು.

ಬಳಿಕ ಸರ್ಕಾರ ತನ್ನ ನೀತಿಗಳ ಮೂಲಕ ಬಡ ಸಾರ್ವಜನಿಕರ ಮೇಲೆ ದಬ್ಬಾಳಿಕೆ ನಡೆಸುತ್ತಿದೆ. ಆದ್ದರಿಂದ ಈ ಸರ್ಕಾರವನ್ನು ಕಾಂಗ್ರೆಸ್ ಸರ್ಕಾರ ಎನ್ನದೆ ಬುಲ್ಡೋಜರ್ ಸರ್ಕಾರ ಎನ್ನಬೇಕಿದೆ ಎಂದು ಸರ್ಕಾರವನ್ನು ಟೀಕಿಸಿದರು.  

ಸಾರ್ವಜನಿಕರು ಕೆರೆಗಳಿಗೆ ಸೇರಿದ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ತೆರವಿನ ಮೂಲಕ ವಶಪಡಿಸಿಕೊಳ್ಳಲು ಮುಂದಾಗಿರುವ ಸರ್ಕಾರ, ಕಾಡುಗೋಡಿ, ಬಾಣಸವಾಡಿ ಸೇರಿದಂತೆ ನಗರದ ಇತರೆಡೆ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಸುರೇಶ್ ಕುಮಾರ್ ಈ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments