Webdunia - Bharat's app for daily news and videos

Install App

ಕಾಂಗ್ರೆಸ್ ವಿರುದ್ಧ ರೆಬಲ್ ಆದ ಜೆಡಿಎಸ್ ಶಾಸಕ

Webdunia
ಮಂಗಳವಾರ, 29 ಮೇ 2018 (18:37 IST)
ಸಾಲ ಮನ್ನಾ ಮಾಡಲು ಬಿಡುತ್ತಿಲ್ಲ ಕಾಂಗ್ರೆಸ್ ಪಕ್ಷ ಬಿಡುತ್ತಿಲ್ಲ ಎಂದು ಆಡಳಿತ ರೂಢ ಜೆಡಿಎಸ್ ಸರ್ಕಾರದ ಶಾಸಕರೊಬ್ಬರು ಮಿತ್ರ ಪಕ್ಷದ ವಿರುದ್ದವೇ ವಾಗ್ದಾಳಿ ನಡೆಸಿದ್ದಾರೆ.
 ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕ್ಷೇತ್ರದ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ, ಸಾಲ ಮನ್ನಾ ಮಾಡೋದಕ್ಕೆ ಕಾಂಗ್ರೆಸ್ ಪಕ್ಷ ಬಿಡುತ್ತಿಲ್ಲ. ಕಾಂಗ್ರೆಸ್ ನಾಯಕರ ಕಂಡೀಷನ್ ನಿಂದ ಎಚ್ಡಿಕೆ ಮುಜುಗರ ಅನಭವಿಸುಂತಾಗಿದೆ. 
 
ಸಿಎಂ ಆದವರಿಗೆ ಹಲವು ಆಲೋಚನೆಗಳು ಇರುತ್ತವೆ. ಅದಕ್ಕೆ ಹಣಕಾಸು ಖಾತೆ ಸಿಎಂ ಬಳಿಯೇ ಇರಬೇಕು‌. ಆದರೆ, ಹಣಕಾಸು ಖಾತೆಯನ್ನ ಸಿಎಂಗೆ ಬಿಟ್ಟುಕೊಡುವುದಕ್ಕೆ ಕಾಂಗ್ರೆಸ್ ನಾಯಕರು ಒಪ್ಪುತ್ತಿಲ್ಲ. ಸಾಲ ಮನ್ನಾ ಮಾಡುವುದಕ್ಕೂ ಹಣಕಾಸು ಖಾತೆ ಮುಖ್ಯವಾಗುತ್ತದೆ. ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಜೆಡಿಎಸ್ ಜೊತೆ ಕಾಂಗ್ರೆಸ್ ನಾಯಕರು ಕೈ ಜೋಡಿಸಿದ್ದಾರೆ.
 
ಇದೀಗ ಹಲವು ಕಂಡೀಷನ್ ಗಳನ್ನು ಹಾಕುತ್ತಿದ್ದಾರೆ. ಖಾತೆ ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಗೊಂದಲ ಸೃಷ್ಟಿಸಿದ್ದಾರೆ. ಇದರಿಂದ ಸಿಎಂ ಕುಮಾರಸ್ವಾಮಿ ಅವರಿಗೆ ಮುಜುಗರ ಆಗುತ್ತಿದೆ. ಎಚ್ಡಿಕೆ ಯಾವುದೇ ತೀರ್ಮಾನ ತೆಗೆದುಕೊಂಡರೂ ಜೆಡಿಎಸ್ ನ ಎಲ್ಲಾ ಶಾಸಕರು ಬದ್ದರಾಗಿರುತ್ತೇವೆ ಎಂದರು. 
 
ಕುಮಾರಸ್ವಾಮಿ ರೈತಪರವಾಗಿ ಇದ್ದಾರೆ. ಸಾಲ ಮನ್ನಾ ಮಾಡಬೇಕೆಂಬುದು ಮಂಡ್ಯ ಜಿಲ್ಲೆಯ ಎಲ್ಲಾ ಶಾಸಕರ ಒತ್ತಾಯವಾಗಿದೆ ಎಂದಿದ್ದಾರೆ‌. ಆದರೆ ಸರ್ಕಾರ ರಚನೆ ಆಗಿ ಕೇವಲ ಎರಡು ವಾರ ಕಳೆಯುತ್ತಿದ್ದಂತೆಯೇ ಮಿತ್ರ ಪಕ್ಷದ ವಿರುದ್ದ ಬಹಿರಂಗ ಹೇಳಿಕೆ ಎರಡು ಪಕ್ಷದ ನಾಯಕರ ಹುಬ್ಬೇರುವಂತೆ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments