Select Your Language

Notifications

webdunia
webdunia
webdunia
webdunia

ಸಿಎಂ ಎದುರಲ್ಲೇ ರೈತನ ಮೇಲೆ ಜೆಡಿಎಸ್ ಕಾರ್ಯಕರ್ತರಿಂದ ಹಲ್ಲೆ

ಸಿಎಂ ಎದುರಲ್ಲೇ ರೈತನ ಮೇಲೆ ಜೆಡಿಎಸ್ ಕಾರ್ಯಕರ್ತರಿಂದ  ಹಲ್ಲೆ
ಮಂಡ್ಯ , ಶನಿವಾರ, 13 ಏಪ್ರಿಲ್ 2019 (12:14 IST)
ಮಂಡ್ಯ : ಮದ್ದೂರು ತಾಲೂಕಿನ ಅಜ್ಜಹಳ್ಳಿ ಗ್ರಾಮದಲ್ಲಿ ಪ್ರಚಾರ ಮಾಡುತ್ತಿದ್ದ ಸಿಎಂ ಕುಮಾರಸ್ವಾಮಿ ಎದುರಲ್ಲೇ ಕಬ್ಬಿನ ಬಾಕಿ ಹಣ ಕೇಳಿದ ರೈತನ ಮೇಲೆ ಜೆಡಿಎಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಗುರುವಾರ ರಾತ್ರಿ ಸಿಎಂ ಕುಮಾರಸ್ವಾಮಿ ಮದ್ದೂರು ತಾಲೂಕಿನ ಅಜ್ಜಹಳ್ಳಿ ಗ್ರಾಮದಲ್ಲಿ ಪ್ರಚಾರಕ್ಕೆ ತೆರಳಿದ್ದ ವೇಳೆ  ರೈತ ರವಿ ಅವರು, ಕಾರ್ಖಾನೆಗೆ ಕಬ್ಬು ಸಾಗಿಸಿ 6 ತಿಂಗಳಾಗಿವೆ. ಇನ್ನೂ ಹಣ ಬಂದಿಲ್ಲ. ನೀವು ಕಬ್ಬಿನ ದರ ನಿಗದಿ ಮಾಡಿಲ್ಲ. ಭತ್ತ ಖರೀದಿ ಕೇಂದ್ರ ತೆರೆದಿಲ್ಲ, ಕೇಂದ್ರದಿಂದಲೂ ಹಣ ಬಂದಿಲ್ಲ. ರೈತರ ರಕ್ಷಣೆ ಮಾಡುವ ಮೊದಲು ಈ ಕೆಲಸ ಮಾಡಿ ಎಂದು ಹೇಳಿದ್ದಾರೆ.


ಆಗ ಅದಕ್ಕೆ ಪ್ರತಿಕ್ರಿಯಿಸಿದ ಸಿಎಂ ಕುಮಾರಸ್ವಾಮಿ ಚುನಾವಣೆ ಮುಗಿದ ತಕ್ಷಣ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ಆದರೆ ಪ್ರಚಾರಕ್ಕೆ ಬಂದಿರುವ ಸಿಎಂ ಅವರನ್ನೇ ಪ್ರಶ್ನಿಸುತ್ತಿಯಾ ಎಂದು ಜೆಡಿಎಸ್ ಕಾರ್ಯಕರ್ತರು ರೈತ ರವಿಯನ್ನು ಎಳೆದುಕೊಂಡು ಹೋಗಿ ಥಳಿಸಿದ್ದಾರೆ. ಇದನ್ನು ನೋಡಿದ ಕುಮಾರಸ್ವಾಮಿ ಯಾವುದೇ ಪ್ರತಿಕ್ರಿಯೆ ನೀಡದೆ ಮುಂದಿನ ಗ್ರಾಮಕ್ಕೆ ತೆರಳಿದ್ದಾರೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.



 

Share this Story:

Follow Webdunia kannada

ಮುಂದಿನ ಸುದ್ದಿ

ವಾರಣಾಸಿಯಲ್ಲಿ ಕಣಕ್ಕೀಳಿಯುತ್ತಿರುವ ಪ್ರಧಾನಿ ಮೋದಿಗೆ ಸಿದ್ಧರಾಮಯ್ಯ ಹಾಕಿದ್ದಾರೆ ಈ ಸವಾಲ್