ಜೆಡಿಎಸ್ ಕಾರ್ಯಕರ್ತರು ಎಲ್ಟಿಟಿಇ ಉಗ್ರರಂತೆ ಇಂತಹದ್ದಕ್ಕೆಲ್ಲ ಬಿಜೆಪಿ ಹೆದರುವ ಪ್ರಶ್ನೆ ಇಲ್ಲವೆಂದು ಮಾಜಿ ಸಚಿವ ಎಚ್.ಹಾಲಪ್ಪ ವ್ಯಂಗ್ಯವಾಡಿದ್ದಾರೆ.
ಸೊರಬ ತಾಲೂಕಿನ ಚನ್ನಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ಹಾಲಪ್ಪ, ಚುನಾವಣೆಯಲ್ಲಿ ಜೆಡಿಎಸ್ ಹಣದ ಹೊಳೆ ಹರಿಸುತ್ತಿದೆ. ಹಣದ ಆಮಿಷಕ್ಕೆ ಬಲಿಯಾಗಬೇಡಿ. ತಾಲೂಕಿನ ಅಭಿವೃದ್ಧಿ ಯಾವ ಸರಕಾರದ ಅವಧಿಯಲ್ಲಿ ಆಗಿದ್ದು ಎಂದು ಜನತೆಗೆ ತಿಳಿಸಿ ಎಂದು ಹೇಳಿದರು.
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಶತಶಿದ್ಧ. ಮುಂದಿನ ನಮ್ಮ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೆ. ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಎಲ್ಲಾ ಕಾರ್ಯಕರ್ತರು ಒಂದಾಗಿ ಎಲ್ಲಾ ಕ್ಷೇತ್ರಗಳಲ್ಲಿ ಅಧಿಕಾರದ ಗದ್ದುಗೆ ಏರಬೇಕು ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.