Select Your Language

Notifications

webdunia
webdunia
webdunia
webdunia

ಸಮನ್ವಯ ಸಭೆಯಲ್ಲಿ ಒಗ್ಗಟ್ಟಿನ ಮಂತ್ರ ಪಠಿಸಿದ ಜೆಡಿಎಸ್- ಬಿಜೆಪಿ ನಾಯಕರು

JDS BJP

Sampriya

ಬೆಂಗಳೂರು , ಶುಕ್ರವಾರ, 29 ಮಾರ್ಚ್ 2024 (17:20 IST)
Photo Courtesy X
ಬೆಂಗಳೂರು: ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದ ಹಾಗೇ ರಾಜ್ಯದಲ್ಲಿ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಲು ಜೆಡಿಎಸ್ ಬಿಜೆಪಿ ಮೈತ್ರಿಯಾಗಿ ಕಸರತ್ತುಗಳನ್ನು ನಡೆಸುತ್ತಿದೆ. ಇಂದು ಜೆಡಿಪಿ ಮತ್ತು ಜೆಡಿಎಸ್‌ ಸಮನ್ವಯ ಸಭೆಯು ಬೆಂಗಳೂರಿನಲ್ಲಿ ನಡೆಯಿತು.

ಈ ಸಭೆಯಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ , ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್‌.ಅಶೋಕ್,  ಮಾಜಿ ಸಚಿವರು, ಶಾಸಕರು ರಾಜ್ಯ ಪದಾಧಿಕಾರಿಗಳು, ಬಿಜೆಪಿ ಮತ್ತು ಜೆಡಿಎಸ್‌ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಅವರು,  ಬಿವೈ ವಿಜಯೇಂದ್ರ ಅವರು ಸಭೆಯಲ್ಲಿ  ಹೆಚ್​ಡಿ ದೇವೇಗೌಡ ಅವರು ಕೊಟ್ಟ ಸಂದೇಶ ಕಾರ್ಯಕರ್ತರಿಗೆ ದೊಡ್ಡ ಶಕ್ತಿ ಬಂದಿದೆ. ಇಂದಿನ ಸಭೆಯಿಂದ 2 ಪಕ್ಷದ ಕಾರ್ಯಕರ್ತರಿಗೆ ಆನೆ ಬಲ ಬಂದಿದೆ. ನಮ್ಮ ವೈಯಕ್ತಿಕ ಸಮಸ್ಯೆ ಏನೇ ಇದ್ದರೂ ಒಟ್ಟಾಗಿ ಕೆಲಸ ಮಾಡುತ್ತೇವೆ. ದೇಶಕ್ಕೋಸ್ಕರ ಒಟ್ಟಾಗಿ ಕೆಲಸ ಮಾಡುವ ನಿರ್ಣಯ ಮಾಡಿದ್ದಾರೆ ಎಂದರು.


Share this Story:

Follow Webdunia kannada

ಮುಂದಿನ ಸುದ್ದಿ

ಮೊದಲು ರಮೇಶ್ ಕುಮಾರ್, ನನ್ನನ್ನು ಒಗ್ಗೂಡಿಸಬೇಕಿದೆ: ಸಚಿವ ಕೆ.ಎಚ್‌.ಮುನಿಯಪ್ಪ