Publish Date: Mon, 18 May 2026 (17:51 IST)
Updated Date: Mon, 18 May 2026 (17:55 IST)
ಬೆಂಗಳೂರು: 2028ರ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ನಡುವೆ ಯಾವುದೇ ಬಿಕ್ಕಟ್ಟು ಬರೋದಿಲ್ಲ ಎಂದು ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಹೇಳಿದರು.
2028 ರ ಚುನಾವಣೆ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನಾವು NDA ಅಲ್ಲಿ ಪಾರ್ಟನರ್ ಆಗಿದ್ದೇವೆ. ಇನ್ನೂ ಮೋದಿ, ಅಮಿತ್ ಶಾ ಜತೆ ನಮ್ಮ ಸಂಬಂಧವಿದ್ದು, ಇದರಲ್ಲಿ ಯಾವುದೇ ಬಿಕ್ಕಟ್ಟು ಬರೋವುದಿಲ್ಲ ಎಂದು ಹೇಳಿದರು.
ಈ ಹೋರಾಟದಲ್ಲಿ ಯಾವುದೇ ಕ್ಲಿಷ್ಟ ಸಮಸ್ಯೆ ಬಂದರೂ ಕೂತು ಬಗೆಹರಿಸಿಕೊಂಡು ಹೋರಾಟ ಮಾಡ್ತೀನಿ ಅಂತ ದೃಢ ವಿಶ್ವಾಸ ಇದೆ ಎಂದರು.
ದಕ್ಷಿಣದಲ್ಲಿ ಕಾಂಗ್ರೆಸ್ ಕೇರಳಂ, ತೆಲಂಗಾಣ, ಕರ್ನಾಟಕ ಇದೆ ಅಂತ ಹೇಳ್ತಾ ಇದ್ದರು. ಮುಂದೆ ಏನಾಗುತ್ತೆ ಅಂತ ನೋಡೋಣ. ಸಮಯ ಬಂದಾಗ ಮಾತನಾಡುತ್ತೇನೆ ಎಂದರು.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ