Select Your Language

Notifications

webdunia
webdunia
webdunia
webdunia

ರಾಮನಗರದಲ್ಲಿ ಜೆಡಿಎಸ್ ಸಮಾವೇಶ: ಗೌಡರಿಂದ ಚಾಲನೆ

ರಾಮನಗರದಲ್ಲಿ ಜೆಡಿಎಸ್ ಸಮಾವೇಶ: ಗೌಡರಿಂದ ಚಾಲನೆ
\ರಾಮನಗರ , ಸೋಮವಾರ, 2 ಮಾರ್ಚ್ 2015 (09:38 IST)
ಜೆಡಿಎಸ್ ಪಕ್ಷವು ನಗರದಲ್ಲಿ ಇಂದು ಜಿಲ್ಲಾ ಬೃಹತ್ ಸಮಾವೇಶವನ್ನು ಆಯೋಜಿಸಿದ್ದು, ಸಮಾವೇಶವನ್ನು ಪಕ್ಷದ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡ ಅವರು ಉದ್ಘಾಟಿಸಲಿದ್ದಾರೆ. ಸಮಾವೇಶವು ಇಂದು 11 ಗಂಟೆಗೆ ಆರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ.  
 
ಸಮಾವೇಶವನ್ನು ಪಕ್ಷ ಸಂಘಟನೆ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದು, ಸದಸ್ಯತ್ವ ನೊಂದಣಿಯನ್ನು ಪ್ರಾರಂಭಿಸಲಾಗುತ್ತಿದೆ. ಜಿಲ್ಲೆಯಲ್ಲಿ 1.50 ಲಕ್ಷಕ್ಕೂ ಹೆಚ್ಚು ಸದಸ್ಯರನ್ನು ನೊಂದಣಿ ಮಾಡಿಕೊಳ್ಳಲು ನಿರ್ಧರಿಸಲಾಗಿದ್ದು, ಓರ್ವ ಸದಸ್ಯರು 5 ರೂ. ನಂತೆ ಪಾವತಿಸಿ ಪಕ್ಷದ ಸದಸ್ಯತ್ವ ಪಡೆಯಬಹುದಾಗಿದೆ. 
 
ಸದಸ್ಯತ್ವ ನೊಂದಣಿ ಕಾರ್ಯಕ್ರಮಕ್ಕೆ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಚಾಲನೆ ನೀಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಸದಸ್ಯತ್ವ ಅಭಿಯಾನ ನಡೆಸಲಾಗುವುದು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಈಗಾಗಲೇ ಉತ್ತರ ಕರ್ನಾಟಕದತ್ತ ಪ್ರವಾಸವನ್ನು ಇಂದಿನಿಂದಲೇ ಆರಂಭಿಸಿದ್ದು, ಮಾರ್ಚ್ 11ರ ವರೆಗೆ ಉತ್ತರ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಸದಸ್ಯತ್ವ ನೋಂದಣಿ ಮಾಡಿಸಲಿದ್ದಾರೆ ಎಂದು ತಿಳಿದು ಬಂದಿದೆ.   
 
ಇನ್ನು ಕಾರ್ಯಕ್ರಮದಲ್ಲಿ 2000ಕ್ಕೂ ಹೆಚ್ಚು ಕಾರ್ಯಕರ್ತರು ಆಗಮಿಸುವ ನಿರೀಕ್ಷೆ ಇದೆ. ಜೊತೆಗೆ ಪಕ್ಷದ ಶಾಸಕರಾದ ಬಾಲಕೃಷ್ಣ, ಬಂಡೆಪ್ಪ ಕಾಶಾಂಪೂರ, ವೈ.ಎಸ್.ವಿ.ದತ್ತಾ ಸೇರಿದಂತೆ 40ಕ್ಕೂ ಹೆಚ್ಚು ಮಾಜಿ ಹಾಗೂ ಹಾಲಿ ಶಾಸಕರು ಆಗಮಿಸಲಿದ್ದು, ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.  
 
ಇನ್ನು ಪಕ್ಷದ ಮತ್ತೋರ್ವ ಶಾಸಕ ಜಮೀರ್ ಅಹ್ಮದ್ ಅವರು ಈಗಾಗಲೇ ವಿದೇಶದಲ್ಲಿರುವ ಕಾರಣ ಸಮಾವೇಶಕ್ಕೆ ಆಗಮಿಸುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. 

Share this Story:

Follow Webdunia kannada