Webdunia - Bharat's app for daily news and videos

Install App

ಜೆಡಿಎಸ್-ಕಾಂಗ್ರೆಸ್‌ ಅಣ್ತಮ್ಮ ಇದ್ದಂತೆ: ಆರ್.ಅಶೋಕ್‌ ಟಾಂಗ್

Webdunia
ಬುಧವಾರ, 27 ಏಪ್ರಿಲ್ 2022 (17:28 IST)
ಜೆಡಿಎಸ್ ಬಿಜೆಪಿಯ ಬಿ ಟೀಂ. ಎರಡೂ ಪಕ್ಷಗಳು ಅಣ್ತಮ್ಮ ಇದ್ದಂತೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿರುಗೇಟು ನೀಡಿದ್ದಾರೆ.
ಹಾಸನದಲ್ಲಿ ಬುಧವಾರ ಮಾತನಾಡಿದ ಅವರು, 2018ರ ವಿಧಾನಸಭೆ ಚುನಾವಣೆಯ ನಂತರ ಅಧಿಕಾರದ ಆಸೆಗಾಗಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದವು, 2019ರ ಲೋಕಸಭೆ ಚುನಾವಣೆ ವೇಳೆ ಇದು ಮುಂದುವರೆದಿತ್ತು. ಧರ್ಮ ಸಿಂಗ್ ಸರ್ಕಾರ ವಿದ್ದಾಗ ನೀವು ಯಾರ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ರಿ, ನಮ್ಮ ಜೊತೆ ಒಂದೇ ಒಂದು ಸಲ ಮೈತ್ರಿ ಮಾಡಿಕೊಂಡಿದ್ದು ಮಿಕ್ಕೆಲ್ಲಾ ಕಾಂಗ್ರೆಸ್‌ ಜೊತೆಗೆ ಜೆಡಿಎಸ್ ಹೆಚ್ಚಾಗಿ ಮೈತ್ರಿ ಮಾಡಿಕೊಂಡಿದೆ ಎಂದು ಹೇಳಿದರು.
ದೇವೇಗೌಡರು ಪ್ರಧಾನಿಯಾಗುವ ಸಮಯದಲ್ಲಿ ಕಾಂಗ್ರೆಸ್‌ ನೊಂದಿಗೆ ಮೈತ್ರಿಯಾಗಿತ್ತು. ಇಂದಿಗೂ ಸಹ ದೇವೇಗೌಡರಿಗೆ ಕಾಂಗ್ರೆಸ್ ಪರವಾಗಿ ಒಲವಿದೆ. ಬಿಜೆಪಿಗೆ ʻಎʼ ಟೀಂ ʻಬಿʼ ಟೀಂನ ಅವಶ್ಯಕತೆಯಿಲ್ಲ ನಾವು ಯಾರ ಮಾತನ್ನು ಸಹ ಕೇಳುವುದಿಲ್ಲ ನಮ್ಮ ಸರ್ಕಾರ ಎನಿದ್ದರು ಅಭಿವೃದ್ದಿ ಪರವಾದ ನಿಲುವನ್ನು ತೆಗೆದುಕೊಳ್ಳುತ್ತೇವೆ ಎಂದು ನುಡಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments