Select Your Language

Notifications

webdunia
webdunia
webdunia
webdunia

ಜೆಡಿಎಸ್-ಕಾಂಗ್ರೆಸ್ ಟಿಕೆಟ್ ಹೊಂದಾಣಿಕೆ ಮಾಡಿಕೊಳ್ಳಲು ಮನವಿ

ಜೆಡಿಎಸ್
ಬೆಂಗಳೂರು: ರಾಹುಲ್ ಗಾಂಧಿ ಬಿ ಟೀಂ ಟೀಕೆಯ ನಂತರ ಒಂದೆಡೆ ಜೆಡಿಎಸ್ ಮತ್ತು ಕಾಂಗ್ರೆಸ್ ಪರಸ್ಪರ ಕೆಸರೆರಚಾಟ ಮಾಡುತ್ತಿದ್ದರೆ ಇನ್ನೊಂದೆಡೆ ಇದೇ ಎರಡು ಪಕ್ಷಗಳು ಟಿಕೆಟ್ ಹಂಚಿಕೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳಬೇಕೆಂದು ಸಂವಿಧಾನ ಉಳಿವಿಗಾಗಿ ಕರ್ನಾಟಕ ಸಂಘ ಮನವಿ ಮಾಡಿದೆ.
 

ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರನ್ನು ಭೇಟಿ ಮಾಡಿದ ಸಂಘಟನೆ, ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಾರದಂತೆ ತಡೆಯಲು ಜೆಡಿಎಸ್-ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಳ್ಳಬೇಕು. ಮತ ವಿಭಜನೆಯಾಗದಂತೆ ಪ್ಲ್ಯಾನ್ ಮಾಡಬೇಕು ಎಂದು ಮನವಿ ಮಾಡಿದೆ.

ಒಂದು ವೇಳೆ ಅತಂತ್ರ ಸ್ಥಿತಿ ನಿರ್ಮಾಣವಾದರೆ ಕಾಂಗ್ರೆಸ್ ಜತೆ ಜೆಡಿಎಸ್ ಕೈ ಜೋಡಿಸಿ ಸರ್ಕಾರ ರಚಿಸಬೇಕು. ಸಮ್ಮಿಶ್ರ ಸರ್ಕಾರ ರೂಪಿಸುವುದಿದ್ದರೆ ಬಿಜೆಪಿ ಜತೆ ಕೈ ಜೋಡಿಸಬಾರದು ಎಂದು ಸಂಘಟನೆ ದೇವೇಗೌಡರಿಗೆ ಮನವಿ ಸಲ್ಲಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ರೇಡಿಯೋ ಜಾಕಿಯ ಬರ್ಬರ ಹತ್ಯೆ