Webdunia - Bharat's app for daily news and videos

Install App

ಜೆಡಿಎಸ್ ಕಾರ್ಪೋರೇಟರ್ ಭೀಕರ ಕೊಲೆ

Webdunia
ಭಾನುವಾರ, 30 ಸೆಪ್ಟಂಬರ್ 2018 (20:26 IST)
ಟೀ ಕುಡಿಯುತ್ತ ಕುಳಿತಿದ್ದ ಮಾಜಿ ಮೇಯರ್ ಹಾಗೂ ಹಾಲಿ ಜೆಡಿಎಸ್ ಕಾರ್ಪೋರೇಟರ್ ನನ್ನು ಕಣ್ಣಿಗೆ ಖಾರದ ಪುಡಿ ಎರಚಿ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ತುಮಕೂರು ನಗರದ ಬಟವಾಡಿ ಸಮೀಪ ಈ ಘಟನೆ ನಡೆದಿದೆ. ಟೀ ಕುಡಿಯುತ್ತಿದ್ದ ಕಾರ್ಪೋರೇಟರ್ ರವಿಕುಮಾರ ಅಲಿಯಾಸ್ ಗಡ್ಡ ರವಿ ಮೇಲೆ ಓರ್ವ ವ್ಯಕ್ತಿ ತನ್ನ ಕೈಯಲ್ಲಿದ್ದ ಬ್ಯಾಗಿನಿಂದ ಖಾರದ ಪುಡಿ ತೆಗೆದು ರವಿಕುಮಾರ ಕಣ್ಣಿಗೆ ಎರಚಿದ್ದಾನೆ. ಆಗ ರವಿಕುಮಾರ ಮತ್ತು ಆತನ ಸ್ನೇಹಿತ ಇಬ್ಬರೂ ಓಡಲಾರಂಭಿಸಿದ್ದಾರೆ. ವಾಹನವೊಂದರಲ್ಲಿದ್ದ ಏಳು ದುಷ್ಕರ್ಮಿಗಳು ಲಾಂಗ್, ಮಚ್ಚುಗಳನ್ನು ಹಿಡಿದು ಸಿನಿಮೀಯ ರೀತಿಯಲ್ಲಿ ದಾಳಿ ನಡೆಸಿ ಭೀಕರವಾಗಿ ಕೊಲೆ ಮಾಡಿದ್ದಾರೆ.

ಹಳೇ ದ್ವೇಷವೇ ಕೊಲೆಗೆ ಕಾರಣ ಇರಬಹುದು ಎಂದು ಪೊಲೀಸರು ಮೇಲ್ನೋಟಕ್ಕೆ ಶಂಕಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments