Webdunia - Bharat's app for daily news and videos

Install App

ಜೆಡಿಎಸ್ ಪಕ್ಷಕ್ಕೆ ಮೂರು ಕ್ಷೇತ್ರಗಳಲ್ಲಿ ಮುಖಭಂಗ: ಠೇವಣಿ ಲಾಸ್

Webdunia
ಮಂಗಳವಾರ, 16 ಫೆಬ್ರವರಿ 2016 (14:21 IST)
ವಿಧಾನಸಭೆ ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಭಾರೀ ಮುಖಭಂಗವಾಗಿದೆ. ಹೆಬ್ಬಾಳ, ದೇವದುರ್ಗ ಮತ್ತು ಬೀದರ್ ಮೂರೂ ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡಿದೆ.  ಹೆಚ್.ಡಿ. ಕುಮಾರಸ್ವಾಮಿ ಭರವಸೆಗೆ ಮತದಾರ ಮಣೆ ಹಾಕಿಲ್ಲ ಎನ್ನುವುದು ಸ್ಪಷ್ಟವಾಗಿದೆ. ಜೆಡಿಎಸ್ ಈ ಚುನಾವಣೆಯಲ್ಲಿ ಮತವಿಭಜನೆ ಮಾಡಿ ಕಾಂಗ್ರೆಸ್‌ಗೆ ನಷ್ಟ ಉಂಟುಮಾಡುತ್ತದೆಂಬ ಅಭಿಪ್ರಾಯ ಹೊಂದಲಾಗಿತ್ತು.

ಆದರೆ ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ಅತ್ಯಂತ ಕಳಪೆ ಪ್ರದರ್ಶನ ನೀಡುವ ಮೂಲಕ ಹೀನಾಯ ಪ್ರದರ್ಶನ ನೀಡಿದೆ.  ಜೆಡಿಎಸ್ ನಾಯಕರು ಈ ಚುನಾವಣೆಯನ್ನು ದೊಡ್ಡ ಮಟ್ಟದಲ್ಲಿ ಪರಿಗಣಿಸಿದ್ದರು. ಜೆಡಿಎಸ್ ಮುಖಂಡರು ವಿವಿಧ ಕ್ಷೇತ್ರಗಳಿಗೆ ಹೋಗಿ ಪ್ರಚಾರ ಕೈಗೊಂಡಿದ್ದು ನಿಷ್ಫಲವಾಯಿತು.  

ಹೆಬ್ಬಾಳ ವಿಧಾನಸಭೆಯಲ್ಲಿ ಇಸ್ಮಾಯಿಲ್ ಷರೀಫ್ 3666 ಮತಗಳನ್ನು ಇಸ್ಮಾಯಿಲ್ ಷರೀಫ್ ಗಳಿಸಿ ಠೇವಣಿ ಕಳೆದುಕೊಂಡರು. ಬೀದರ್ ವಿಧಾನಸಭೆ ಕ್ಷೇತ್ರದಲ್ಲಿ ಮೊಹಮದ್ ಅಯಾಜ್ 4420 ಮತಗಳನ್ನು ಮಾತ್ರ ಗಳಿಸಿ ಠೇವಣಿ ಕಳೆದುಕೊಂಡಿದ್ದಾರೆ.  ದೇವದುರ್ಗದಲ್ಲಿ ಕರಿಯಮ್ಮ 9156 ಮತಗಳನ್ನು ಗಳಿಸಿ ಅವರೂ ಠೇವಣಿ ಕಳೆದುಕೊಂಡಿದ್ದಾರೆ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments