Select Your Language

Notifications

webdunia
webdunia
webdunia
webdunia

ದೇವೇಗೌಡರ ನಂತ್ರ ಜೆಡಿಎಸ್ ಉಳಿಯೋಲ್ಲ: ಜಮೀರ್ ವ್ಯಂಗ್ಯ

ದೇವೇಗೌಡರ ನಂತ್ರ ಜೆಡಿಎಸ್ ಉಳಿಯೋಲ್ಲ: ಜಮೀರ್ ವ್ಯಂಗ್ಯ
ಕೋಲಾರ , ಭಾನುವಾರ, 15 ಅಕ್ಟೋಬರ್ 2017 (15:40 IST)
ಜೆಡಿಎಸ್ ವರಿಷ್ಠ ದೇವೇಗೌಡರ ನಂತರ ಜೆಡಿಎಸ್ ಪಕ್ಷದ ಅಸ್ತಿತ್ವ ಉಳಿಯುವುದಿಲ್ಲ ಎಂದು ಜೆಡಿಎಸ್ ಉಚ್ಚಾಟಿತ ಶಾಸಕ ಜಮೀರ್ ಅಹ್ಮದ್ ಖಾನ್ ವ್ಯಂಗ್ಯವಾಡಿದ್ದಾರೆ.
ಜೆಡಿಎಸ್ ಪಕ್ಷದಲ್ಲಿ ಎಚ್.ಡಿ ರೇವಣ್ಣನೇ ಅರ್ಜಿ ಹಾಕಿ ಟಿಕೆಟ್ ತೆಗೆದುತೊಳ್ಳುವಂತಹ ಪರಿಸ್ಥಿತಿ ಬಂದಿದೆ. ರೇವಣ್ಣ ಕುಮಾರಣ್ಣನನ್ನು ಮಾತಿನಲ್ಲಿಯೇ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
 
ಜೆಡಿಎಸ್ ಪಕ್ಷ ಬಿಡುವ ಬಗ್ಗೆ ಕನಸಿನಲ್ಲೂ ಯೋಚಿಸಿರಲಿಲ್ಲ. ನಾನು ಜೆಡಿಎಸ್ ಪಕ್ಷಕ್ಕೆ ದುಡಿದಿದ್ದೇನೆ. ಜೆಡಿಎಸ್ ಪಕ್ಷದಿಂದ ನನಗೆ ಏನೂ ದೊರೆತಿಲ್ಲ ಎಂದರು.
 
ಚಾಮರಾಜಪೇಟೆಯ ಜನ ನನ್ನನ್ನು ಆಯ್ಕೆ ಮಾಡಿದ್ದಾರೆ, ಜೆಡಿಎಸ್ ಪಕ್ಷ ನನ್ನನ್ನು ಆಯ್ಕೆ ಮಾಡಿಲ್ಲ, ಜೆಡಿಎಸ್ ಪಕ್ಷವೇ ಪಕ್ಷ ಬಿಟ್ಟು ಹೋಗು ಎಂದ ಕಾರಣ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ ಎಂದು ತಿಳಿಸಿದ್ದಾರೆ.
 
ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರುವುದು ಖಚಿತ. ಮುಂದಿನ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುವುದು ಪಕ್ಕಾ ಎಂದು ಜೆಡಿಎಸ್ ಉಚ್ಚಾಟಿತ ಶಾಸಕ ಜಮೀರ್ ಅಹ್ಮದ್ ಖಾನ್ ಭವಿಷ್ಯ ನುಡಿದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಅಪಾರ್ಟ್ ಮೆಂಟ್ ನಲ್ಲಿ ವೇಶ್ಯವಾಟಿಕೆ: ಇಬ್ಬರು ಪಿಂಪ್ ಸೇರಿ ನಾಲ್ವರ ಬಂಧನ