Webdunia - Bharat's app for daily news and videos

Install App

‘ಜೆಡಿಎಸ್ ಫುಲ್ ಗರಂ: ಶಾಸಕರನ್ನು ಅನರ್ಹಗೊಳಿಸಲು ದೂರು’

Webdunia
ಗುರುವಾರ, 11 ಜುಲೈ 2019 (19:18 IST)

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರೋ ಜೆಡಿಎಸ್ ನ ಮೂವರ ಶಾಸಕರನ್ನ ಅನರ್ಹಗೊಳಿಸುವಂತೆ ಜೆಡಿಎಸ್ ಸ್ಪೀಕರ್ ಗೆ ದೂರು ಸಲ್ಲಿಸಿದೆ.

ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರೋ ಜೆಡಿಎಸ್ ನ ಮೂವರ ವಿರುದ್ಧ ಪಕ್ಷ ಗಂಭೀರ ಕ್ರಮಕ್ಕೆ ಮುಂದಾಗಿದೆ.

ಜೆಡಿಎಸ್ ಮೂವರು ಶಾಸಕರ ಅನರ್ಹತೆಗೆ ಕೋರಿ ಸ್ಪೀಕರ್ ಅವರಿಗೆ ಜೆಡಿಎಸ್ ನಾಯಕರು ದೂರು ಸಲ್ಲಿಕೆ ಮಾಡಿದ್ದಾರೆ.

ಜೆಡಿಎಸ್ ಪರ ವಕೀಲ, ವಕೀಲರ ಸಂಘದ ಅಧ್ಯಕ್ಷ ರಂಗನಾಥ್ ಅವರು ಸ್ಪೀಕರ್ ಕಚೇರಿ ಆಗಮಿಸಿದರು. ಹುಣಸೂರು ಶಾಸಕ ಹೆಚ್.ವಿಶ್ವನಾಥ್, ಕೆಆರ್ ಪೇಟೆ ಶಾಸಕ ನಾರಾಯಣ ಗೌಡ ಹಾಗೂ ಮಹಾಲಕ್ಷ್ಮೀ ಲೇಔಟ್ ಗೋಪಾಲಯ್ಯ ವಿರುದ್ಧ ದೂರು ಸಲ್ಲಿಸಲಾಗಿದೆ.

ಮಾಜಿ ಶಾಸಕ ಕೋನರೆಡ್ಡಿ, ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಮತ್ತಿತರರು ದೂರು ಸಲ್ಲಿಸುವ ವೇಳೆ ಇದ್ದರು.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments