ಹೌದಪ್ಪಾ ಡಿಕೆಶಿ..ಕುಮಾರಣ್ಣನದ್ದು ಖಾಲಿ ಕೈ, ನೀವು ಲೂಟೇಶಿ: ಜೆಡಿಎಸ್ ಟೀಕೆ

Krishnaveni K
ಸೋಮವಾರ, 27 ಅಕ್ಟೋಬರ್ 2025 (14:30 IST)
ಬೆಂಗಳೂರು: ಕುಮಾರಸ್ವಾಮಿಯದ್ದು ಖಾಲಿ ಟ್ರಂಕ್ ಎಂದು ಟೀಕಿಸಿದ ಡಿಸಿಎಂ ಡಿಕೆ ಶಿವಕುಮಾರ್ ಗೆ ತಿರುಗೇಟು ನೀಡಿರುವ ರಾಜ್ಯ ಜೆಡಿಎಸ್ ಘಟಕ ಹೌದಪ್ಪಾ ಕುಮಾರಣ್ಣನದ್ದು ಖಾಲಿ ಕೈ ನೀವು ಲೂಟೇಶಿ ಎಂದು ಟ್ವೀಟ್ ಮಾಡಿದೆ.

ಬಿ ಖಾತಾದಿಂದ ಎ ಖಾತಾಗೆ ಪರಿವರ್ತನೆ ಮಾಡುವ ಡಿಕೆ ಶಿವಕುಮಾರ್ ಆಫರ್ ಎಲ್ಲಾ ಬೋಗಸ್. ಇದು ಲೂಟಿ ಮಾಡುವ ಒಂದು ತಂತ್ರ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲಿ ಆರೋಪ ಮಾಡಿದ್ದರು. ಅವರ ಆರೋಪಕ್ಕೆ ಡಿಕೆ ಶಿವಕುಮಾರ್ ಇಂದು ಕುಮಾರಸ್ವಾಮಿಯವರದ್ದು ಖಾಲಿ ಟ್ರಂಕ್ ಎಂದು ತಿರುಗೇಟು ನೀಡಿದ್ದರು.

ಇದಕ್ಕೆ ಜೆಡಿಎಸ್ ಸೋಷಿಯಲ್ ಮೀಡಿಯಾ ಎಕ್ಸ್ ಪುಟದಲ್ಲಿ ಇದಕ್ಕೆ ತಿರುಗೇಟು ನೀಡಿದ್ದಾರೆ. ‘ಟ್ರಂಕ್ ತುಂಬಿಸಿಕೊಳ್ಳಲು ಹೊರಟಿರುವ ಡಿಕೆ ಶಿವಕುಮಾರ್ ಅವರೇ, ಕೇಳಿಸ್ಕೋಳ್ಳಿ.

ಬಿ ಖಾತಾದಿಂದ ಎ ಖಾತಾ ಪರಿವರ್ತನೆಗೆ 5% ವಸೂಲಿಗೆ ಸ್ವತಃ ಕಾಂಗ್ರೆಸ್ ಪಕ್ಷದ ಮುಖಂಡರೇ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ವರ್ಷದ ಹಿಂದಷ್ಟೇ ಸರ್ಕಾರ  ಗೈಡ್ ಲೈನ್ಸ್ ವಾಲ್ಯೂ ಹೆಚ್ಚಳ ಮಾಡಿದ್ದು, ಈಗ ಖಾತೆ ಪರಿವರ್ತನೆಗೆ 5% ವಸೂಲಿ ಜನ ವಿರೋಧಿ ನಡೆಯಲ್ಲದೇ ಮತ್ತೇನು! ಸಣ್ಣ  ಸೈಟ್ ಹೊಂದಿರುವವರು 5 ಲಕ್ಷ ರೂ. ಕಟ್ಟಲು ಸಾಧ್ಯವೇ ?

ಬಿ ಖಾತಾದಿಂದ ಎ ಖಾತಾಗೆ ಪರಿವರ್ತನೆ ಹೆಸರಲ್ಲಿ ಬಡವರ ಸುಲಿಗೆ ಮಾಡುವ ಕಾರ್ಯಕ್ರಮ ಎಂದು ಕಾಂಗ್ರೆಸ್ಸಿಗರೇ ಛೀಮಾರಿ ಹಾಕುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ಈ  5% ಹಗಲು ದರೋಡೆ ಕೈ ಬಿಟ್ಟು, ಅದಷ್ಟು ಕಡಿಮೆ ಮಾಡಿ ಬಡ ಜನರ ಬದುಕಿಗೆ ಆಸರೆಯಾಗಿ’ ಎಂದು ಆಗ್ರಹಿಸಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments